ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ. ನಮ್ಮಲ್ಲಿ ಕಚ್ಚಾಟವಿಲ್ಲ, ಆರಾಮಾಗಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅಧಿಕಾರ ಕೊಟ್ಟರೆ ಒಳ್ಳೆಯ ಕೆಲಸ ಮಾಡುತ್ತೇವೆ, ಇಲ್ಲ ಸುಮ್ಮನ್ನಿರುತ್ತೇವೆ. ಈ ಹಿಂದೆ ಅಧಿಕಾರ ಕೊಟ್ಟಿದ್ದರು 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ನಾನು ಮುಖ್ಯಮಂತ್ರಿ ಎಂದು ಒಬ್ಬರಿಗೊಬ್ಬರು ಹೊಡೆದಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲ ಎಂದು ತಿಳಿಸಿದರು.
ಕೋವಿಡ್ ಹೆಸರಿನಲ್ಲಿ ಗ್ರಾ.ಪಂ. ಅನುದಾನವನ್ನು ಕಡಿತ ಮಾಡಿದ್ದಾರೆ, ಎಂಎಲ್ಎ ಅನುದಾನವನ್ನು ಕೊಟ್ಟಿಲ್ಲ. ಗ್ರಾಮ ಪಂಚಾಯಿತಿಯ ಹಕ್ಕನ್ನು ಕಸಿದುಕೊಳ್ಳಬೇಡಿ. ಸರ್ಕಾರ ಇದನ್ನು ಸರಿಪಡಿಸದಿದ್ದರೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಒಳಗೊಂಡಂತೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ನಂತರ ರಾಜ್ಯಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಸರ್ಕಾರಕ್ಕೆ ನಾಚಿಕೆಯಾಗಬೇಕು, ಇದನ್ನು ಸರ್ಕಾರ ಎನ್ನುತ್ತಾರಾ? ಸರ್ಕಾರ ಲೂಟಿಕೋರರ ಕೈಸೇರಿದೆ, ಕೊರೊನಾ ಹೆಸರಿನಲ್ಲಿ ರಾಜ್ಯದಲ್ಲಿ ಲೂಟಿ ನಡೆಯುತ್ತಿದೆ. ಮೋದಿಯವರೇ ಸರ್ಕಾರವನ್ನು ಲೂಟಿಕೋರರ ಕೈಗೆ ಕೊಟ್ಟಿದ್ದೀರಾ, ಕೇಂದ್ರ ಸರ್ಕಾರ ನೀಡುವ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡುತ್ತೇನೆ, ಅಚ್ಛೆ ದಿನ್ ಬರುತ್ತೆ ಎಂದು ಮೋದಿ ಹೇಳುತ್ತಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ತರಿಸಿಕೊಳ್ಳಿ. ಇದು ದಪ್ಪ, ಎಮ್ಮೆ ಚರ್ಮದ ಸರ್ಕಾರ. ಸರ್ಕಾರಕ್ಕೂ ಕೊರೊನಾ ಇದೆಯೋ ಗೊತ್ತಿಲ್ಲ, ಅದನ್ನು ರಿಪೇರಿ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…