Featured

ನಮ್ಮಲ್ಲಿ ಕಚ್ಚಾಟವಿಲ್ಲ ,ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ  : ರೇವಣ್ಣ -Vishwanews24

ನಮ್ಮಲ್ಲಿ ಕಚ್ಚಾಟವಿಲ್ಲ ,ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ  : ರೇವಣ್ಣ -Vishwanews24

ಇದು ದಪ್ಪ, ಎಮ್ಮೆ ಚರ್ಮದ ಸರ್ಕಾರ..

ಸರ್ಕಾರಕ್ಕೂ ಕೊರೊನಾ ಇದೆಯೋ ಗೊತ್ತಿಲ್ಲ, ಅದನ್ನು ರಿಪೇರಿ ಮಾಡಬೇಕು..

ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ. ನಮ್ಮಲ್ಲಿ ಕಚ್ಚಾಟವಿಲ್ಲ, ಆರಾಮಾಗಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅಧಿಕಾರ ಕೊಟ್ಟರೆ ಒಳ್ಳೆಯ ಕೆಲಸ ಮಾಡುತ್ತೇವೆ, ಇಲ್ಲ ಸುಮ್ಮನ್ನಿರುತ್ತೇವೆ. ಈ ಹಿಂದೆ ಅಧಿಕಾರ ಕೊಟ್ಟಿದ್ದರು 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ನಾನು ಮುಖ್ಯಮಂತ್ರಿ ಎಂದು ಒಬ್ಬರಿಗೊಬ್ಬರು ಹೊಡೆದಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲ ಎಂದು ತಿಳಿಸಿದರು.

ಕೋವಿಡ್ ಹೆಸರಿನಲ್ಲಿ ಗ್ರಾ.ಪಂ. ಅನುದಾನವನ್ನು ಕಡಿತ ಮಾಡಿದ್ದಾರೆ, ಎಂಎಲ್‍ಎ ಅನುದಾನವನ್ನು ಕೊಟ್ಟಿಲ್ಲ. ಗ್ರಾಮ ಪಂಚಾಯಿತಿಯ ಹಕ್ಕನ್ನು ಕಸಿದುಕೊಳ್ಳಬೇಡಿ. ಸರ್ಕಾರ ಇದನ್ನು ಸರಿಪಡಿಸದಿದ್ದರೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಒಳಗೊಂಡಂತೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ನಂತರ ರಾಜ್ಯಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಸರ್ಕಾರಕ್ಕೆ ನಾಚಿಕೆಯಾಗಬೇಕು, ಇದನ್ನು ಸರ್ಕಾರ ಎನ್ನುತ್ತಾರಾ? ಸರ್ಕಾರ ಲೂಟಿಕೋರರ ಕೈಸೇರಿದೆ, ಕೊರೊನಾ ಹೆಸರಿನಲ್ಲಿ ರಾಜ್ಯದಲ್ಲಿ ಲೂಟಿ ನಡೆಯುತ್ತಿದೆ. ಮೋದಿಯವರೇ ಸರ್ಕಾರವನ್ನು ಲೂಟಿಕೋರರ ಕೈಗೆ ಕೊಟ್ಟಿದ್ದೀರಾ, ಕೇಂದ್ರ ಸರ್ಕಾರ ನೀಡುವ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡುತ್ತೇನೆ, ಅಚ್ಛೆ ದಿನ್ ಬರುತ್ತೆ ಎಂದು ಮೋದಿ ಹೇಳುತ್ತಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ತರಿಸಿಕೊಳ್ಳಿ. ಇದು ದಪ್ಪ, ಎಮ್ಮೆ ಚರ್ಮದ ಸರ್ಕಾರ. ಸರ್ಕಾರಕ್ಕೂ ಕೊರೊನಾ ಇದೆಯೋ ಗೊತ್ತಿಲ್ಲ, ಅದನ್ನು ರಿಪೇರಿ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

13 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

35 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

55 minutes ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

1 hour ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

1 hour ago