Featured

ನಮ್ಮಲ್ಲಿ ಹಿಂದುತ್ವವಿದೆ , ನಾವು ಹಿಂದೂವಾಗಿಯೇ ಹುಟ್ಟಿದ್ದು ಹಿಂದೂವಾಗಿಯೇ ಸಾಯುವುದು : ಡಿ.ಕೆ ಶಿವಕುಮಾರ್ – Vishwanews24

ನಾವು ಹಿಂದೂವಾಗಿಯೇ ಹುಟ್ಟಿದ್ದು ಹಿಂದೂವಾಗಿಯೇ ಸಾಯುವುದು : ಡಿ.ಕೆ ಶಿವಕುಮಾರ್

ಬೆಳಗಾವಿ: ನಾವು ಹಿಂದೂಗಳೇ  , ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ. ಬಿಜೆಪಿಯವರದ್ದು ನಾಟಕ. ಒಳಗಿನಿಂದ ನಮ್ಮಲ್ಲಿ ಹಿಂದುತ್ವವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಿಂದುತ್ವದ ಜಪ ಮಾಡಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಾವರ್ಕರ್ ಬಿಸಿ ಜೋರಾಗಿ ತಟ್ಟುವ ಸಾಧ್ಯತೆ ಹೆಚ್ಚಿದೆ. ಇಂದಿನಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಬೆಳಗಾವಿ ಸುವರ್ಣಸೌಧದಲ್ಲಿ ಮೊದಲ ದಿನದಿಂದಲೇ ಹಿಂದುತ್ವ ವಿಚಾರವೇ ಹೆಚ್ಚು ಪ್ರತಿಧ್ವನಿಸುವ ಮುನ್ಸೂಚನೆ ಸಿಕ್ಕಿದೆ.

ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಸ್ಪೀಕರ್ ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನಿಯರ ಫೋಟೋ ಹಾಕ್ತೀವಿ ಅಂತ ಹೇಳಿದ್ದರು. ಆದರೆ ಇಲ್ಲಿಗೆ ಬಂದ ಮೇಲೆ ಮಾಧ್ಯಮ ಮೂಲಕ ಸಾವರ್ಕರ್  ಫೋಟೋ ಹಾಕೋದು ಗೊತ್ತಾಯಿತು. ಸಾವರ್ಕರ್‌ಗೂ ನಮ್ಮ ರಾಜ್ಯಕ್ಕೂ ಏನು ಸಂಬಂಧ? ಸಾವರ್ಕರ್ ವಿವಾದಾತ್ಮಕ ವ್ಯಕ್ತಿ ಅಂತ ಎಲ್ಲರಿಗೂ ಗೊತ್ತು. ಇದೀಗ ಬಿಜೆಪಿ ಅಧಿವೇಶನಕ್ಕೆ ಅಡ್ಡಿ ತರಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ. ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ. ಸ್ವಾತಂತ್ರಕ್ಕೆ ಸಾವರ್ಕರ್ ಕೊಡುಗೆ ಇಲ್ಲ. ಅವರು ತಪ್ಪು ಒಪ್ಪಿಕೊಂಡು ಪತ್ರ ಬರೆದು ಕೊಟ್ಟಿದ್ದರು. ಅವರು ಬ್ರಿಟಿಷರ ಜೊತೆ ಕೈ ಜೋಡಿಸಿದ್ದರು. ಕಮೀಷನ್, ಮತದಾರರ ಪಟ್ಟಿ ಹಗರಣ ಯಾವುದೂ ಚರ್ಚೆ ಆಗಬಾರದು ಅಂತ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago