ಬೆಳಗಾವಿ: ನಾವು ಹಿಂದೂಗಳೇ , ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ. ಬಿಜೆಪಿಯವರದ್ದು ನಾಟಕ. ಒಳಗಿನಿಂದ ನಮ್ಮಲ್ಲಿ ಹಿಂದುತ್ವವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಿಂದುತ್ವದ ಜಪ ಮಾಡಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಾವರ್ಕರ್ ಬಿಸಿ ಜೋರಾಗಿ ತಟ್ಟುವ ಸಾಧ್ಯತೆ ಹೆಚ್ಚಿದೆ. ಇಂದಿನಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಬೆಳಗಾವಿ ಸುವರ್ಣಸೌಧದಲ್ಲಿ ಮೊದಲ ದಿನದಿಂದಲೇ ಹಿಂದುತ್ವ ವಿಚಾರವೇ ಹೆಚ್ಚು ಪ್ರತಿಧ್ವನಿಸುವ ಮುನ್ಸೂಚನೆ ಸಿಕ್ಕಿದೆ.
ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಸ್ಪೀಕರ್ ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನಿಯರ ಫೋಟೋ ಹಾಕ್ತೀವಿ ಅಂತ ಹೇಳಿದ್ದರು. ಆದರೆ ಇಲ್ಲಿಗೆ ಬಂದ ಮೇಲೆ ಮಾಧ್ಯಮ ಮೂಲಕ ಸಾವರ್ಕರ್ ಫೋಟೋ ಹಾಕೋದು ಗೊತ್ತಾಯಿತು. ಸಾವರ್ಕರ್ಗೂ ನಮ್ಮ ರಾಜ್ಯಕ್ಕೂ ಏನು ಸಂಬಂಧ? ಸಾವರ್ಕರ್ ವಿವಾದಾತ್ಮಕ ವ್ಯಕ್ತಿ ಅಂತ ಎಲ್ಲರಿಗೂ ಗೊತ್ತು. ಇದೀಗ ಬಿಜೆಪಿ ಅಧಿವೇಶನಕ್ಕೆ ಅಡ್ಡಿ ತರಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ. ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ. ಸ್ವಾತಂತ್ರಕ್ಕೆ ಸಾವರ್ಕರ್ ಕೊಡುಗೆ ಇಲ್ಲ. ಅವರು ತಪ್ಪು ಒಪ್ಪಿಕೊಂಡು ಪತ್ರ ಬರೆದು ಕೊಟ್ಟಿದ್ದರು. ಅವರು ಬ್ರಿಟಿಷರ ಜೊತೆ ಕೈ ಜೋಡಿಸಿದ್ದರು. ಕಮೀಷನ್, ಮತದಾರರ ಪಟ್ಟಿ ಹಗರಣ ಯಾವುದೂ ಚರ್ಚೆ ಆಗಬಾರದು ಅಂತ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…