Featured

ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ : ಎಚ್.ವಿಶ್ವನಾಥ್ -Vishwanews24

ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ : ಎಚ್.ವಿಶ್ವನಾಥ್ -Vishwanews24

ಬೆಂಗಳೂರು: ನಮ್ಮಿಂದಲೇ ಸರ್ಕಾರ ಬಂದರೂ ನಮ್ಮ ಜೊತೆ ನಿಲ್ಲಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಧಾನ ಹೊರ ಹಾಕಿದ್ದಾರೆ.

ಹೈ ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ. ವಿಧಾನ ಪರಿಷತ್ ಚುನಾವಣೆ ವೇಳೆ ಅಭ್ಯರ್ಥಿಗಳ ಪಟ್ಟಿಯಿಂದ ನನ್ನ ಹೆಸರು ತೆಗೆದರು. ನನ್ನ ಅನುಭವ ಬಳಸಿಕೊಳ್ಳಬಹುದಿತ್ತು. ಆದರೆ ಕಡೆಗಣಿಸಿದರು, ಎಲ್ಲವನ್ನೂ ನಾನು ಎದುರಿಸುತ್ತೇನೆ. ನನಗೂ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿದ್ದರೆ ಮಂತ್ರಿ ಆಗುತ್ತಿದ್ದೆ ಎಂದು ತಿಳಿಸಿದರು.

ಪರಿಷತ್ ಚುನಾವಣೆ ವೇಳೆ ನನ್ನ ಹೆಸರು ಯಾಕೆ ತೆಗೆದರು ಅಂತ ಗೊತ್ತಿಲ್ಲ. ನನ್ನ ಬಗ್ಗೆ ಎಜಿಗೆ ಅನಾದರ ಯಾಕೆ, ಅಡ್ವೊಕೇಟ್ ಜನರಲ್ ನನ್ನ ಜೊತೆ ಮಾತಾಡಲಿಲ್ಲ. ಸರಿಯಾಗಿ ಕೆಲಸ ಮಾಡಲಿಲ್ಲ. ನಾಮನಿರ್ದೇಶನದ ಬಗ್ಗೆ ಅವರು ಸ್ಪಷ್ಟವಾಗಿ ಹೇಳಲಿಲ್ಲ ಎಂದು ಎಜಿ ಮೇಲೆ ಸಹ ವಿಶ್ವನಾಥ್ ಆರೋಪ ಮಾಡಿದ್ದಾರೆ. ಬಿಜೆಪಿ ಕೋರ್ ಕಮಿಟಿಗೆ ಜೂನ್ ನಲ್ಲಿ ಪರಿಷತ್ ಗೆ ನನ್ನ ಹೆಸರೂ ಸೇರಿಸಿ ನಾಲ್ವರ ಹೆಸರು ಕಳುಹಿಸಲಾಗಿತ್ತು. ಅಲ್ಲಿಂದ ಪಟ್ಟಿ ಬರುವಾಗ ನನ್ನ ಹೆಸರು ಇರಲಿಲ್ಲ. ದೆಹಲಿಯಲ್ಲಿ ನನ್ನ ಹೆಸರು ತೆಗೆಸಿದ್ದು ಯಾಕೆ ಎಂದು ಬಿಜೆಪಿ ನಾಯಕರಲ್ಲಿ ಕೇಳಿದೆ. ನಿಮ್ಮನ್ನು ನಾಮನಿರ್ದೇಶನ ಮಾಡುತ್ತೇವೆ ಎಂದರು.

ಇಂದು ಸಿಎಂ ಜೊತೆ ಮಾತನಾಡುತ್ತೇನೆ. ನನ್ನ ಬಗ್ಗೆ ಕಾಳಜಿ ತೋರಿ ಮಾತನಾಡಿದವರಿಗೆ ಧನ್ಯವಾದಗಳು. ನನಗೆ ತೀರ್ಪಿನ ಪ್ರತಿ ಸಿಕ್ಕ ಮೇಲೆ ವಕೀಲರ ಜೊತೆ ಚರ್ಚೆ ಮಾಡುತ್ತೇನೆ. ಬಳಿಕ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

7 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

8 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

8 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

9 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

10 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

10 hours ago