ಬೆಂಗಳೂರು: ನಮ್ಮಿಂದಲೇ ಸರ್ಕಾರ ಬಂದರೂ ನಮ್ಮ ಜೊತೆ ನಿಲ್ಲಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಧಾನ ಹೊರ ಹಾಕಿದ್ದಾರೆ.
ಹೈ ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ. ವಿಧಾನ ಪರಿಷತ್ ಚುನಾವಣೆ ವೇಳೆ ಅಭ್ಯರ್ಥಿಗಳ ಪಟ್ಟಿಯಿಂದ ನನ್ನ ಹೆಸರು ತೆಗೆದರು. ನನ್ನ ಅನುಭವ ಬಳಸಿಕೊಳ್ಳಬಹುದಿತ್ತು. ಆದರೆ ಕಡೆಗಣಿಸಿದರು, ಎಲ್ಲವನ್ನೂ ನಾನು ಎದುರಿಸುತ್ತೇನೆ. ನನಗೂ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿದ್ದರೆ ಮಂತ್ರಿ ಆಗುತ್ತಿದ್ದೆ ಎಂದು ತಿಳಿಸಿದರು.
ಪರಿಷತ್ ಚುನಾವಣೆ ವೇಳೆ ನನ್ನ ಹೆಸರು ಯಾಕೆ ತೆಗೆದರು ಅಂತ ಗೊತ್ತಿಲ್ಲ. ನನ್ನ ಬಗ್ಗೆ ಎಜಿಗೆ ಅನಾದರ ಯಾಕೆ, ಅಡ್ವೊಕೇಟ್ ಜನರಲ್ ನನ್ನ ಜೊತೆ ಮಾತಾಡಲಿಲ್ಲ. ಸರಿಯಾಗಿ ಕೆಲಸ ಮಾಡಲಿಲ್ಲ. ನಾಮನಿರ್ದೇಶನದ ಬಗ್ಗೆ ಅವರು ಸ್ಪಷ್ಟವಾಗಿ ಹೇಳಲಿಲ್ಲ ಎಂದು ಎಜಿ ಮೇಲೆ ಸಹ ವಿಶ್ವನಾಥ್ ಆರೋಪ ಮಾಡಿದ್ದಾರೆ. ಬಿಜೆಪಿ ಕೋರ್ ಕಮಿಟಿಗೆ ಜೂನ್ ನಲ್ಲಿ ಪರಿಷತ್ ಗೆ ನನ್ನ ಹೆಸರೂ ಸೇರಿಸಿ ನಾಲ್ವರ ಹೆಸರು ಕಳುಹಿಸಲಾಗಿತ್ತು. ಅಲ್ಲಿಂದ ಪಟ್ಟಿ ಬರುವಾಗ ನನ್ನ ಹೆಸರು ಇರಲಿಲ್ಲ. ದೆಹಲಿಯಲ್ಲಿ ನನ್ನ ಹೆಸರು ತೆಗೆಸಿದ್ದು ಯಾಕೆ ಎಂದು ಬಿಜೆಪಿ ನಾಯಕರಲ್ಲಿ ಕೇಳಿದೆ. ನಿಮ್ಮನ್ನು ನಾಮನಿರ್ದೇಶನ ಮಾಡುತ್ತೇವೆ ಎಂದರು.
ಇಂದು ಸಿಎಂ ಜೊತೆ ಮಾತನಾಡುತ್ತೇನೆ. ನನ್ನ ಬಗ್ಗೆ ಕಾಳಜಿ ತೋರಿ ಮಾತನಾಡಿದವರಿಗೆ ಧನ್ಯವಾದಗಳು. ನನಗೆ ತೀರ್ಪಿನ ಪ್ರತಿ ಸಿಕ್ಕ ಮೇಲೆ ವಕೀಲರ ಜೊತೆ ಚರ್ಚೆ ಮಾಡುತ್ತೇನೆ. ಬಳಿಕ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…