ಬೆಂಗಳೂರು: ನಮ್ಮಿಂದಲೇ ಸರ್ಕಾರ ಬಂದರೂ ನಮ್ಮ ಜೊತೆ ನಿಲ್ಲಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಧಾನ ಹೊರ ಹಾಕಿದ್ದಾರೆ.
ಹೈ ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮಿಂದ ಸರ್ಕಾರ ಬಂದರೂ, ನಮ್ ಜೊತೆ ನಿಲ್ಲಲಿಲ್ಲ. ಕಾನೂನಿನ ವಿಚಾರದಲ್ಲಿ ಯಾರೂ ಸಹಾಯ ಮಾಡಲಿಲ್ಲ. ವಿಧಾನ ಪರಿಷತ್ ಚುನಾವಣೆ ವೇಳೆ ಅಭ್ಯರ್ಥಿಗಳ ಪಟ್ಟಿಯಿಂದ ನನ್ನ ಹೆಸರು ತೆಗೆದರು. ನನ್ನ ಅನುಭವ ಬಳಸಿಕೊಳ್ಳಬಹುದಿತ್ತು. ಆದರೆ ಕಡೆಗಣಿಸಿದರು, ಎಲ್ಲವನ್ನೂ ನಾನು ಎದುರಿಸುತ್ತೇನೆ. ನನಗೂ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿದ್ದರೆ ಮಂತ್ರಿ ಆಗುತ್ತಿದ್ದೆ ಎಂದು ತಿಳಿಸಿದರು.
ಪರಿಷತ್ ಚುನಾವಣೆ ವೇಳೆ ನನ್ನ ಹೆಸರು ಯಾಕೆ ತೆಗೆದರು ಅಂತ ಗೊತ್ತಿಲ್ಲ. ನನ್ನ ಬಗ್ಗೆ ಎಜಿಗೆ ಅನಾದರ ಯಾಕೆ, ಅಡ್ವೊಕೇಟ್ ಜನರಲ್ ನನ್ನ ಜೊತೆ ಮಾತಾಡಲಿಲ್ಲ. ಸರಿಯಾಗಿ ಕೆಲಸ ಮಾಡಲಿಲ್ಲ. ನಾಮನಿರ್ದೇಶನದ ಬಗ್ಗೆ ಅವರು ಸ್ಪಷ್ಟವಾಗಿ ಹೇಳಲಿಲ್ಲ ಎಂದು ಎಜಿ ಮೇಲೆ ಸಹ ವಿಶ್ವನಾಥ್ ಆರೋಪ ಮಾಡಿದ್ದಾರೆ. ಬಿಜೆಪಿ ಕೋರ್ ಕಮಿಟಿಗೆ ಜೂನ್ ನಲ್ಲಿ ಪರಿಷತ್ ಗೆ ನನ್ನ ಹೆಸರೂ ಸೇರಿಸಿ ನಾಲ್ವರ ಹೆಸರು ಕಳುಹಿಸಲಾಗಿತ್ತು. ಅಲ್ಲಿಂದ ಪಟ್ಟಿ ಬರುವಾಗ ನನ್ನ ಹೆಸರು ಇರಲಿಲ್ಲ. ದೆಹಲಿಯಲ್ಲಿ ನನ್ನ ಹೆಸರು ತೆಗೆಸಿದ್ದು ಯಾಕೆ ಎಂದು ಬಿಜೆಪಿ ನಾಯಕರಲ್ಲಿ ಕೇಳಿದೆ. ನಿಮ್ಮನ್ನು ನಾಮನಿರ್ದೇಶನ ಮಾಡುತ್ತೇವೆ ಎಂದರು.
ಇಂದು ಸಿಎಂ ಜೊತೆ ಮಾತನಾಡುತ್ತೇನೆ. ನನ್ನ ಬಗ್ಗೆ ಕಾಳಜಿ ತೋರಿ ಮಾತನಾಡಿದವರಿಗೆ ಧನ್ಯವಾದಗಳು. ನನಗೆ ತೀರ್ಪಿನ ಪ್ರತಿ ಸಿಕ್ಕ ಮೇಲೆ ವಕೀಲರ ಜೊತೆ ಚರ್ಚೆ ಮಾಡುತ್ತೇನೆ. ಬಳಿಕ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…