Featured

ನಮ್ಮೂರಲ್ಲೂ ನಾನು ರಾಮ ಮಂದಿರ ಕಟ್ಟಿಸ್ತಾ ಇದ್ದೇನೆ : ಸಿದ್ದರಾಮಯ್ಯ -Vishwanews24

ನಮ್ಮೂರಲ್ಲೂ ನಾನು ರಾಮ ಮಂದಿರ ಕಟ್ಟಿಸ್ತಾ ಇದ್ದೇನೆ : ಸಿದ್ದರಾಮಯ್ಯ -Vishwanews24

ಮೈಸೂರು, : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಿಸುವ ಮೂಲಕ ಜನರಿಗೆ ಬಿಜೆಪಿ ಪರ ‘ಸಿಂಪತಿ’ ಬರಲಿ ಅಂತ ಮಾಡುತ್ತಾ ಇದ್ದಾರೆ. ಅಂದರೆ ಇದು ಪಕ್ಷದ ಪ್ರಚಾರ ಅಷ್ಟೇ. ಆದರೆ ಜನರು ಶ್ರೀ ರಾಮನಿಗೆ ಮಂದಿರ ಕಟ್ಟಿಸ್ತಾ ಇದ್ದಾರೆ ಅಂತ ಹಣ ಕೊಡುತ್ತಾ ಇದ್ದಾರೆಯೇ ಹೊರತು ಬಿಜೆಪಿಗೆ ಅಲ್ಲ. ಅಯೋಧ್ಯೆಯಲ್ಲಿ ಮಾತ್ರವಲ್ಲ, ಪ್ರತೀ ಹಳ್ಳಿಗಳಲ್ಲೂ ಶ್ರೀ ರಾಮ ಮಂದಿರಗಳಿವೆ. ನಮ್ಮೂರಲ್ಲೂ ನಾನು ರಾಮ ಮಂದಿರ ಕಟ್ಟಿಸ್ತಾ ಇದ್ದೇನೆ. ಅದಕ್ಕಾಗಿ ಈಗಾಗಲೇ ಸಾರ್ವಜನಿಕರು ವಂತಿಗೆ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ, ಅಭಿವೃದ್ಧಿಯಲ್ಲಿ ಬಂಗಾಳವನ್ನು ಸುವರ್ಣಯುಗಕ್ಕೆ ಕರೆದೊಯ್ಯುತ್ತೇವೆ : ಅಮಿತ್ ಶಾ ಭರ್ಜರಿ ಚುನಾವಣಾ ಪ್ರಚಾರ -Vishwanews24

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿರುವ ಬಗ್ಗೆ ಲೆಕ್ಕ ಕೇಳಲು ಹಣ ಕೊಟ್ಟವರೇ ಆಗಬೇಕಿಲ್ಲ. ಅದು ಸಾರ್ವಜನಿಕ ಹಣವಾಗಿರುವುದರಿಂದ ಯಾರೂ ಕೂಡಾ ಲೆಕ್ಕ ಕೇಳಬಹುದು. ಈಗಲೇ ಸುಮಾರು 1,500 ಕೋಟಿ ರೂ. ಸಂಗ್ರಹಿಸಿದ್ದಾರೆ. ಈ ಹಿಂದೆಯೂ ಮಂದಿರದ ಹೆಸರಿನಲ್ಲಿ ತುಂಬಾ ಹಣ, ಇಟ್ಟಿಗೆ ಅಂತ ಸಂಗ್ರಹಿಸಿದ್ದರು. ಆದರೆ ಈ ಬಗ್ಗೆ ಲೆಕ್ಕ ಕೊಡದೇ ಇರುವುದರಿಂದ ಅದರಲ್ಲಿ ಭ್ರಷ್ಟಾಚಾರ ಆಗಿದೆ ಎಂದೇ ಅರ್ಥ. ಆದ್ದರಿಂದ ಇದೀಗ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

8 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago