ರಾಜ್ಯ ನ್ಯೂಸ್

“ನಮ್ಮ ಅಮೂಲ್ಯ ಮತಕ್ಕೆ ಬೆಲೆ ಸಿಗುವಂತೆ ಮತದಾನ ಮಾಡೋಣ”

ಹೌದು ಚುನಾವಣೆಯೆಂಬ ಹಬ್ಬಕ್ಕೆ ದಿನಗಣನೆ ಶುರುವಾಗಿದೆ ಅಂದರೆ ಮೇ 12 ಕ್ಕೆ ಚುನಾವಣೆ ಹಾಗೂ ಅದೇ ತಿಂಗಳ 15 ಕ್ಕೆ ಫಲಿತಾಂಶ ಅದಕ್ಕೆ ಈ ಬಾರಿಯಾದರೂ ನಮ್ಮ ಅಮೂಲ್ಯ ಮತಕ್ಕೆ ಬೆಲೆ ಸಿಗುವಂತೆ ಮತದಾನ ಮಾಡೋಣ. ಅಳಿವು-ಉಳಿವಿನ ಪ್ರಶ್ನೆಯಾಗಿರುವ ಮಹತ್ವದ ಚುನಾವಣೆಗೆ ಎಲ್ಲ ಪಕ್ಷಗಳು ಹಾಗೂ ಪಕ್ಷದ ಅಭ್ಯರ್ಥಿಗಳು ಅಂತಿಮಹಂತದ ಸಿದ್ಧತೆ ನಡೆಸಿವೆ.

ಇದರ ಮಧ್ಯ ಮತದಾರರ ಜವಾಬ್ದಾರಿ ಏನೆಂದರೆ ರಾಜಕೀಯ ಪಕ್ಷಗಳು ನೀಡುವ ಯಾವುದೇ ಆಮಿಷಕ್ಕೆ ಆಸೆಪಡದೆ ಒಬ್ಬ ಒಳ್ಳೆಯ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದು. ಅಂದರೆ ಬರಿ ಆಶ್ವಾಸನೆಗಳನ್ನೇ ನೀಡುತ್ತಾ ಬಂದಿರುವ ಜನಪ್ರತಿನಿಧಿಗಳ ಕೈಬಿಟ್ಟು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗಾಗಿ ಒಳ್ಳೆಯ ಕೆಲಸ ಮಾಡುವ ಹಾಗು ಮಾಡಿಕೊಂಡು ಬಂದ ಜನಪ್ರತಿನಿಧಿಯನ್ನು ಆಯ್ಕೆಮಾಡಬೇಕು. ಪ್ರಸ್ತುತವಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಂದೇ ವಾಕ್ಯವನ್ನು ಹೇಳುತ್ತಿದ್ದಾರೆ “ಯುವಜನತೆ ದೇಶದ ಶಕ್ತಿ” ಎಂದು ಈ ಮಾತಲ್ಲಿ ತುಂಬಾ ಶಕ್ತಿ ಇದೆ ಅದೇನೆಂದರೆ ಭಾರತದ ಸುಮಾರು 85 ಕೋಟಿ ಮತದಾರರ ಪೈಕಿ ಅರ್ಧದಷ್ಟು 35 ವರ್ಷದೊಳಗಿನ ಯುವ ಮತದಾರರಿದ್ದಾರೆ ಹಾಗಾಗಿ ರಾಜಕಾರಣಿಗಳ ಭವಿಷ್ಯ ನಿರ್ಧರಿಸುವ ಶಕ್ತಿ ಯುವ ಭಾರತದ ಕೈಯಲ್ಲಿದೆ.

ಹಾಗಾಗಿ ರಾಜಕೀಯ ಪಕ್ಷಗಳು ಯುವ ಮತದಾರರಿಗೆ ಮಣೆ ಹಾಕುತ್ತಿವೆ. ನಮ್ಮ ರಾಜ್ಯದಲ್ಲಿ ಈ ವರ್ಷದ ಮತದಾರರ ಸಂಖ್ಯೆ ಸುಮಾರು 5 ಕೋಟಿ ಇವರ ಪೈಕಿ ಅರ್ಧದಷ್ಟು ಯುವ ಮತದಾರರೇ ಇರುವರು ಅದರಲ್ಲೂ ಸುಮಾರು 65 ಲಕ್ಷ ಮಂದಿ ಮೊದಲ ಬಾರಿಗೆ ತಮ್ಮ ಮತವನ್ನು ಚಲಾಯಿಸಲಿದ್ದಾರೆ. ಸುಮಾರು 2.5 ಕೋಟಿ ಮತಗಳು ಯುವಜನರ ಕೈಯಲ್ಲಿವೆ ಈ ಯುವ ಮತದಾರರ ಮತಗಳು ಸೂಕ್ತರೀತಿಯಲ್ಲಿ ಚಲಾವಣೆ ಗೊಂಡರೆ ಮಾದರಿ ರಾಜ್ಯ ನಿರ್ಮಿಸಬಹುದು. ರೈತರ ಸಮಸ್ಯೆ, ಭ್ರಷ್ಟಾಚಾರ, ಬೆಲೆ ಏರಿಕೆ, ಕೋಮುವಾದ ಇವೆಲ್ಲವನ್ನು ತಡೆದು ಇವುಗಳಿಗೆ ಸೂಕ್ತ ಪರಿಹಾರ ಕಂಡು ಕೊಳ್ಳಬೇಕೆಂದರೆ ಇವೆಲ್ಲವನ್ನು ಅಸ್ತ್ರಗಳನ್ನಾಗಿ ಮಾಡಿಕೊಂಡು ಜಾತಿ ಧರ್ಮ ಸಂಘಟನೆಗಳ ಆಧಾರದ ಮೇಲೆ ನಾಟಕೀಯ ರಾಜಕೀಯ ಮಾಡುವ ರಾಜಕಾರಣಿಗಳಿಗೆ ಬೆಂಬಲ ನೀಡಬಾರದು. ಅಧಿಕಾರ ಎಂಬ ಮೋಹ ಬಿಟ್ಟು ನನ್ನ ರಾಜ್ಯ ನನ್ನ ಜನ ಎಂದು ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿ ಪ್ರಜಾಪ್ರಭುತ್ವವನ್ನು ಉಳಿಸಿ-ಬೆಳೆಸುವ ಅಭ್ಯರ್ಥಿಗಳಿಗೆ ನಮ್ಮ ಮತ ನೀಡಬೇಕು. ನಾವು ಸಜ್ಜನರಂತೆ ಕುಳಿತುಕೊಂಡರೆ ನಮ್ಮ ವ್ಯವಸ್ಥೆ ಸುಧಾರಣೆಯಾಗುವುದಿಲ್ಲ ಈ ಬಾರಿಯಾದರೂ ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಒಬ್ಬ ಅತ್ಯುತ್ತಮ ಜನ ಸೇವಕನನ್ನು ಆಯ್ಕೆ ಮಾಡೋಣ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago