ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದಿದ್ದಾರೆ.
ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಅಂತ ಹೇಳಿದ್ದಾರೆ.
ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತ ತಿಳಿಸಿದ್ದಾರೆ.
ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…