Featured

ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ : ನಳಿನ್ -Vishwanews24

ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ : ನಳಿನ್ -Vishwanews24

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಕೊರೊನಾದಿಂದು ಗುಣಮುಖರಾಗಿದ್ದು, ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿದ್ದಾರೆ.

ಈ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ ಎಂದಿದ್ದಾರೆ.

ನಳಿನ್‌‌ ಕುಮಾರ್‌ ಕಟೀಲ್‌ ಅವರಿಗೆ ಆಗಸ್ಟ್‌ 30ರಂದು ಕೊರೊನಾ ಪಾಸಿಟಿವ್‌ ದೃಢಪಟ್ಟಿತ್ತು. ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಟ್ವೀಟ್‌ ಮೂಲಕ ತಿಳಿಸಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago