Featured

ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ : ನಳಿನ್ -Vishwanews24

ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ : ನಳಿನ್ -Vishwanews24

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಕೊರೊನಾದಿಂದು ಗುಣಮುಖರಾಗಿದ್ದು, ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿದ್ದಾರೆ.

ಈ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ ಎಂದಿದ್ದಾರೆ.

ನಳಿನ್‌‌ ಕುಮಾರ್‌ ಕಟೀಲ್‌ ಅವರಿಗೆ ಆಗಸ್ಟ್‌ 30ರಂದು ಕೊರೊನಾ ಪಾಸಿಟಿವ್‌ ದೃಢಪಟ್ಟಿತ್ತು. ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಟ್ವೀಟ್‌ ಮೂಲಕ ತಿಳಿಸಿದ್ದರು.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

44 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago