ಉಡುಪಿ, : ರಾಷ್ಟçಪಿತ ಮಹಾತ್ಮ ಗಾಂಧಿಜಿಯವರ ಅತ್ಯಂತ ಪ್ರೀತಿ ಪಾತ್ರವಾಗಿರುವ ಕೆಲಸ ಸ್ವಚ್ಛತೆ ಮಾತ್ರವಲ್ಲದೇ ನಮ್ಮ ದೇಶದ ಪ್ರಧಾನ ಮಂತ್ರಿಯವರ ಕನಸು ಭಾರತದ ದೇಶದ ಶುಚಿತ್ವ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯನ್ನು ಅತ್ಯಂತ ಸ್ವಚ್ಚ ಜಿಲ್ಲೆಯನ್ನಾಗಿ ಮಾಡಲು ಸಂಕಲ್ಪ ಮಾಡುವಂತೆ ಯುವಜನರಿಗೆ , ಎನ್ಸಿಸಿ, ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ವಿವಿಧ ಸಂಘಟನೆಗಳಿಗೆ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಕರೆ ನೀಡಿದರು.
ಅವರು ಇಂದು ಎಮ್ಜಿಎಮ್ ಕಾಲೇಜಿನ ಆವರಣದಲ್ಲಿ ,ಕ್ಲೀನ್ ಇಂಡಿಯಾ ಕಾರ್ಯಕ್ರಮದ ಅಂಗವಾಗಿ, ಕಸ ಕೊಂಡೊಯ್ಯುವ ಸ್ವಚ್ಛ ವಾಹಿನಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ, ವಿದ್ಯಾರ್ಥಿಗಳಿಗೆ ಹೆಕ್ಕಿದ ಪ್ಲಾಸ್ಟಿಕ್ ಕಸವನ್ನು ತುಂಬಿಸಲು ಚೀಲಗಳನ್ನು ವಿತರಿಸಿ ಮಾತನಾಡಿದರು.
ರಾಷ್ಟ್ರ ಮಟ್ಟದಲ್ಲಿ ಅಕ್ಟೋಬರ್ ೧ ರಿಂದ ೩೧ ರ ಒಂದು ತಿಂಗಳುಗಳ ಕಾಲ ನಡೆಯುವ “ಕ್ಲೀನ್ ಇಂಡಿಯಾ” ಕಾರ್ಯಕ್ರಮ ಇದಾಗಿದ್ದು , ಭಾರತ ಸರಕಾರದ ಯವಜನ ವ್ಯವಹಾರ ಮತ್ತ ಕ್ರೀಡಾ ಸಚಿವಾಲಯ ನೇತ್ರತ್ವದಲ್ಲಿ ನೆಹರು ಯುವ ಕೇದ್ರದ ಸಂಯೋಜನೆಯೊoದಿಗೆ , ಮನೆಯಲ್ಲಿಯಾಗಲಿ ಸಾರ್ವಜನಿಕ ಸ್ಥಳಗಳಲ್ಲಿಯಾಗಲಿ ಒಂದು ಬಾರಿ ಬಳಸಿ ಬಿಸಾಡಿದಂತಹ ಪ್ಲಾಸ್ಟಿಕ್ಗಳನ್ನು ಹೆಕ್ಕಿ ನಂತರ ಹೆಕ್ಕಿದ ಪ್ಲಾಸ್ಟಿಕ್ ತ್ಯಾಜ್ಯವನ್ನು ತೂಕ ನೋಡಿ ಆಯಾ ಸ್ಥಳೀಯ ಸರಕಾರ, ಗ್ರಾಮ ಪಂಚಾಯತ್ ಅಥವಾ ನಗರ ಸಭಾ ಎಸ್ಎಲ್ಆರ್ಎಮ್/ಸ್ವಚ್ಛ ಸಂಕೀರ್ಣ ಕೇಂದ್ರಗಳಿಗೆ ಹಸ್ತಾಂತರಿಸುವoತೆ ಹೇಳಿದರು.
ಕ್ಲೀನ್ ಇಂಡಿಯಾ ಅಭಿಯಾನವನ್ನು ಗ್ರಾಮ ಮಟ್ಟದಿಂದ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದವರೆಗೆ ಈ ಕಾರ್ಯಕ್ರಮ ಹಾಕಿಕೊಂಡಿದ್ದು ಉಡುಪಿ ಜಿಲ್ಲಾ ಮಟ್ಟದಲ್ಲಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಲ್ಲಿ ಉಡುಪಿ ಜಿಲ್ಲಾಡಳಿತದೊಂದಿಗೆ ಉಡುಪಿ ನಗರ ಸಭೆ, ಎನ್ಎಸ್ಎಸ್ ಎನ್ಸಿಸಿ, ಸ್ಕೌಟ್ಸ್ ಎಂಡ್ ಗೈಡ್ಸ್, ರೋರ್ಸ್ ಎಂಡ್ ರೇಂರ್ಸ್, ಜಿಲ್ಲೆಯಾದ್ಯಂತ ಇರುವ ಯುವಕ ಯುವತಿ ಸಂಘಟನೆಗಳು, ಸ್ವಸಹಾಯ ಸಂಘಗಳ ಸದಸ್ಯರು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಡೆಸುವಲ್ಲಿ ಸಹಕರಿಸುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಕಾಲೇಜಿನ ಆವರಣದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕುವುದರ ಮೂಲಕ ವಿದ್ಯಾರ್ಥಿಗಳಿಗೆ ಮಾದರಿಯಾದರು.
ಇಂದಿನ ಕಾರ್ಯಕ್ರಮದಲ್ಲಿ ೨೦೦ಕ್ಕೂ ಮಿಕ್ಕಿ ಯುವಕ ಯುವತಿ ಯುವತಿಯರು ಭಾಗವಹಿಸಿದ್ದು , ಮುಂದಿನ ಒಂದು ತಿಂಗಳ ಅವಧಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ, ಜಿಲ್ಲೆಯ ಹಲವಾರು ಸಮಾಜಮುಖಿ ಕೆಲಸಗಳಲ್ಲಿ ಈಗಾಗಲೇ ತೊಡಗಿಸಿಕೊಂಡಿರುವ ಅತ್ಯಂತ ಕ್ರೀಯಾಶೀಲ ಸಂಘಟನೆಗಳಾದ ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಜೆಸಿಐ, ಇಂಡಿಯನ್ ಸೀನಿಯರ್ ಸಿಟಿಜನ್, ಸ್ವಚ್ಛ ಭಾರತ್ ಪ್ರೆಂಡ್ಸ್, ಭಾರತೀಯ ವಿಕಾಸ ಟ್ರಸ್ಟ್ ಹಾಗೂ ಇನ್ನಿತರ ಸಂಘಟನೆಗಳು ಭಾಗವಹಿಸಲಿವೆ.
ರಾಷ್ಟ್ರ ಹಿತದ ಹಾಗೂ ಅತ್ಯಂತ ಮಹತ್ವದ ಈ ಕಾರ್ಯಕ್ರಮಕ್ಕೆ ಉಡುಪಿಯ ಎಲ್ಲಾ ಬ್ಯಾಂಕ್ ಗಳು ಹಾಗೂ ದೊಡ್ಡ ಸಂಸ್ಥೆಗಳು,ವಿಶೇಷವಾಗಿ ಲೀಡ್ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ಎಲ್ಲಾ ರೀತಿಯ ವಿತ್ತೀಯ ಸಹಕಾರವನ್ನ ನೀಡಲು ಮುಂದಾಗಿವೆ.
ಕ್ಲೀನ್ ಇಂಡಿಯಾ ದ ಜಿಲ್ಲಾ ನೋಡಲ್ ಆಧಿಕಾರಿ ಶ್ರೀನಿವಾಸ್, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ, ಉದಯ್ ಶೆಟ್ಟಿ , ಆಯುಕ್ತರು ನಗರ ಸಭೆ ಉಡುಪಿ, ಲೀಡ್ ಬ್ಯಾಂಕ್ ಮ್ಯಾನೆಜರ್ ಪೀರ್ಸಾಬ್ ಪಿಂಜರ್, ಎಮ್ಜಿಎಮ್ ಕಾಲೇಜಿನ ಪ್ರಾಂಶುಪಾಲರು ದೇವಿದಾಸ್ ನಾಯಕ್, ಸ್ವಚ್ಛ ಭಾರತ್ ಪ್ರೆಂಡ್ಸ್ ಗಣೇಶ್ ನಾಯಕ್ ರಾಘವೇಂದ್ರ ಕರ್ವಾಲೊ, ಬಿವಿಟಿ ಸಂಸ್ಥೆಯ ಸಿಇಒ ಮಣಿಪಾಲ ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.
ವಿಲ್ಫ್ರೆಡ್ ಡಿಸೋಜ ಜಿಲ್ಲಾ ಯುವ ಜನ ಅಧಿಕಾರಿ ನೆಹರು ಯುವ ಕೇಂದ್ರ, ಭಾರತ ಸರಕಾರ ಹಾಗೂ ಈ ಕಾರ್ಯಕ್ರಮದ ಮುಖ್ಯ ಸಂಯೋಜಕರು ಸ್ವಾಗತಿಸಿ, ಪ್ರಾಸ್ತವಿಕ ನುಡಿ ನಿರೂಪಿಸಿದರು.
ಜಲ ಶಕ್ತಿ ಹಾಗೂ ಸ್ವಚ್ಛ ಭಾರತ್ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಜೋಸೆಫ್ ಜಿ ಎಮ್ ರೆಬೆಲ್ಲೊ ವಂದಿಸಿದರು.
ಜಿಲ್ಲೆಯಲ್ಲಿ ನೈರ್ಮಲ್ಯ ಗಣತಿ
ಉಡುಪಿ, : ಜಿಲ್ಲೆಯಲ್ಲಿ ನೈರ್ಮಲ್ಯ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಲು ನೈರ್ಮಲ್ಯ ಗಣತಿ ನಡೆಸಲಾಗುತ್ತಿದ್ದು, ಈ ಗಣತಿಯ ಆಧಾರದಲ್ಲಿ ಸ್ಥಿತಿಗತಿಗಳ ಸುಧಾರಣೆಗೆ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ.
ಈ ಗಣತಿಯಲ್ಲಿ ಕುಟುಂಬಗಳ ವೈಯಕ್ತಿಕ ಶೌಚಾಲಯದ ಬಳಕೆ, ಶೌಚಾಲಯ ತುಂಬಿದಾಗ ವಿಲೇವಾರಿ ವಿಧಾನದ ಬಗ್ಗೆ, ತ್ಯಾಜ್ಯವನ್ನು ಕುಟುಂಬ ಹಂತದಲ್ಲಿ ವಿಂಗಡಣೆ ಹಾಗೂ ಅದರ ವಿಲೇವಾರಿ ವಿಧಾನ, ದ್ರವತ್ಯಾಜ್ಯ ನಿರ್ವಹಣೆಯ ವಿಧಾನ ಸೇರಿದಂತೆ ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸಲಾಗುವುದು. ಇದರೊಂದಿಗೆ ಕುಟುಂಬಗಳಿಗೆ ನೈರ್ಮಲ್ಯತೆ ಬಗ್ಗೆ ಹೆಚ್ಚಿನ ಮಾಹಿತಿ , ಅವಳಿಗುಂಡಿ ಶೌಚಾಲಯದ ಮಹತ್ವ, ಮ್ಯಾನುವಲ್ ಸ್ಯ್ಕಾವೆಂಜರ್ ಕಾಯಿದೆ, ಹಸಿ ತ್ಯಾಜ್ಯ ನಿರ್ವಹಣೆ ವಿಧಾನ, ಒಣತ್ಯಾಜ್ಯ ನಿರ್ವಹಣೆ, ಋತುಚಕ್ರ ತ್ಯಾಜ್ಯ ನಿರ್ವಹಣೆ, ಬೂದುನೀರು ನಿರ್ವಹಣೆ ಅಗತ್ಯತೆ ಇತ್ಯಾದಿ ವಿಷಯಗಳ ಬಗ್ಗೆ ಒಉಓಖಇಉಂ ಯೋಜನೆಯಲ್ಲಿ ಸೋಕ್ ಪಿಟ್ ನಿರ್ಮಾಣ, ಗೊಬ್ಬರಗುಂಡಿ ನಿರ್ಮಾಣ, ಎರೆಹುಳು ಘಟಕ, ಪೌಷ್ಠಿಕ ತೋಟ ಇತ್ಯಾದಿ ಮಾಹಿತಿ, ಜೊತೆಯಲ್ಲಿ ಎಎಒ ಮನೆ ಮನೆಗೆ ಗಂಗೆ ಯೋಜನೆ ಬಗ್ಗೆ ಸಹ ಮಾಹಿತಿ ನೀಡಲಾಗುವುದು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…