Featured

ನಮ್ಮ ಉದ್ದೇಶ ಬಡವರಿಗೆ ಕಡಿಮೆ ಬೆಲೆಯಲ್ಲಿ ಮರಳು ಸಿಗುವಂತಾಗಬೇಕು ಎನ್ನುವುದು : ಸುಕುಮಾರ್ ಶೆಟ್ಟಿ -Vishwanews24

ಕುಂದಾಪುರ: ಕುಡಿಯುವ ನೀರು, ಅಂತರ್ಜಲಮಟ್ಟ ಏರಿಕೆ ದೃಷ್ಟಿಯಲ್ಲಿ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಂಡಿ ಅಣೆಕಟ್ಟು ಗುರುತಿಸಿ ಹೂಳೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೀಘ್ರವೇ ಗ್ರಾಪಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿದರು.

ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಹೂಳೆತ್ತಲು ಪಂಚಾಯಿತಿ ಮೂಲಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಕಾಮಗಾರಿಗೆ ಉಪಯೋಗಿಸಬಹುದಾದ ಹೂಳು ಯಾರ್ಡ್‌ನಲ್ಲಿ ಸಂಗ್ರಹಿಸಿ ಅಲ್ಲಿಂದ ಕಡಿಮೆ ಬೆಲೆ ವಿತರಿಸಬೇಕು. ಪ್ರತೀ ಯೂನಿಟ್‌ಗೆ ಎರಡು ಸಾವಿರ ಬೆಲೆ ನಿಗಧಿಪಡಿಸಬೇಕು. ಈ ರೀತಿ ಮಾಡಿದರೆ ಬಡವರಿಗೂ ಮನೆ ಕಟ್ಟಿಕೊಳ್ಳಲು ಕಡಿಮೆ ಬೆಲೆಯಲ್ಲಿ ಮರಳು ಸಿಕ್ಕಂತಾಗುತ್ತದೆ. ಈ ಪ್ರಕ್ರಿಯೆ ಆದಷ್ಟು ಬೇಗ ಆಯಾ ಪಂಚಾಯಿತಿಗಳಲ್ಲಿ ಜಾರಿಗೊಳಿಸಬೇಕು ಎಂದು ಸೂಚನೆ ನೀಡಿದರು.

ನಾಡ ಗ್ರಾಪಂ ಸೇರಿದಂತೆ ಹಲವೆಡೆ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ. ಇದನ್ನು ನಾನು ಸಹಿಸಲ್ಲ. ಯಾರ್‍ಯಾರಿಗೋ ತಿನ್ನಲು ನಾನು ಬಿಡೋದಿಲ್ಲ. ಈ ಕೆಲಸ ಮುಂದೆ ನಡೆಯಬಾರದು. ನಮ್ಮ ಉದ್ದೇಶ ಬಡವರಿಗೆ ಕಡಿಮೆ ಬೆಲೆಯಲ್ಲಿ ಮರಳು ಸಿಗುವಂತಾಗಬೇಕು ಎನ್ನುವುದು. ಎಲ್ಲೆಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆಯೋ ಮಾಹಿತಿ ಕಲೆ ಹಾಕಿ ಕೂಡಲೇ ಅದರ ವಿರುದ್ದ ಕ್ರಮಕೈಗೊಳ್ಳಿ ಎಂದು ಗಣಿ ಮತ್ತು ಭೂ ವಿಜ್ಙಾನ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಉಪಾಧ್ಯಕ್ಷ ರಾಮ್‌ಕಿಶನ್ ಹೆಗ್ಡೆ, ಬೈಂದೂರು ತಹಸೀಲ್ದಾರ್ ಬಸವರಾಜ್ ಪೂಜಾರ್, ಕುಂದಾಪುರ ತಾಲೂಕು ಪಂಚಾಯಿತಿ ಪ್ರಭಾರ ಇಒ ಡಾ. ನಾಗಭೂಷಣ್ ಉಡುಪ, ಬೈಂದೂರು ಇಓ ಭಾರತಿ, ಗಣಿ ಮತ್ತು ಭೂ ವಿಜ್ಙಾನ ಇಲಾಖೆಯ ಸಹಾಯಕ ನಿದೇರ್ಶಕ ರಾಮ್ ಜಿ ನಾಯ್ಕ್ ಇದ್ದರು.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago