ಕುಂದಾಪುರ: ಕುಡಿಯುವ ನೀರು, ಅಂತರ್ಜಲಮಟ್ಟ ಏರಿಕೆ ದೃಷ್ಟಿಯಲ್ಲಿ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಂಡಿ ಅಣೆಕಟ್ಟು ಗುರುತಿಸಿ ಹೂಳೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೀಘ್ರವೇ ಗ್ರಾಪಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿದರು.
ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಹೂಳೆತ್ತಲು ಪಂಚಾಯಿತಿ ಮೂಲಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಕಾಮಗಾರಿಗೆ ಉಪಯೋಗಿಸಬಹುದಾದ ಹೂಳು ಯಾರ್ಡ್ನಲ್ಲಿ ಸಂಗ್ರಹಿಸಿ ಅಲ್ಲಿಂದ ಕಡಿಮೆ ಬೆಲೆ ವಿತರಿಸಬೇಕು. ಪ್ರತೀ ಯೂನಿಟ್ಗೆ ಎರಡು ಸಾವಿರ ಬೆಲೆ ನಿಗಧಿಪಡಿಸಬೇಕು. ಈ ರೀತಿ ಮಾಡಿದರೆ ಬಡವರಿಗೂ ಮನೆ ಕಟ್ಟಿಕೊಳ್ಳಲು ಕಡಿಮೆ ಬೆಲೆಯಲ್ಲಿ ಮರಳು ಸಿಕ್ಕಂತಾಗುತ್ತದೆ. ಈ ಪ್ರಕ್ರಿಯೆ ಆದಷ್ಟು ಬೇಗ ಆಯಾ ಪಂಚಾಯಿತಿಗಳಲ್ಲಿ ಜಾರಿಗೊಳಿಸಬೇಕು ಎಂದು ಸೂಚನೆ ನೀಡಿದರು.
ನಾಡ ಗ್ರಾಪಂ ಸೇರಿದಂತೆ ಹಲವೆಡೆ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ. ಇದನ್ನು ನಾನು ಸಹಿಸಲ್ಲ. ಯಾರ್ಯಾರಿಗೋ ತಿನ್ನಲು ನಾನು ಬಿಡೋದಿಲ್ಲ. ಈ ಕೆಲಸ ಮುಂದೆ ನಡೆಯಬಾರದು. ನಮ್ಮ ಉದ್ದೇಶ ಬಡವರಿಗೆ ಕಡಿಮೆ ಬೆಲೆಯಲ್ಲಿ ಮರಳು ಸಿಗುವಂತಾಗಬೇಕು ಎನ್ನುವುದು. ಎಲ್ಲೆಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆಯೋ ಮಾಹಿತಿ ಕಲೆ ಹಾಕಿ ಕೂಡಲೇ ಅದರ ವಿರುದ್ದ ಕ್ರಮಕೈಗೊಳ್ಳಿ ಎಂದು ಗಣಿ ಮತ್ತು ಭೂ ವಿಜ್ಙಾನ ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಉಪಾಧ್ಯಕ್ಷ ರಾಮ್ಕಿಶನ್ ಹೆಗ್ಡೆ, ಬೈಂದೂರು ತಹಸೀಲ್ದಾರ್ ಬಸವರಾಜ್ ಪೂಜಾರ್, ಕುಂದಾಪುರ ತಾಲೂಕು ಪಂಚಾಯಿತಿ ಪ್ರಭಾರ ಇಒ ಡಾ. ನಾಗಭೂಷಣ್ ಉಡುಪ, ಬೈಂದೂರು ಇಓ ಭಾರತಿ, ಗಣಿ ಮತ್ತು ಭೂ ವಿಜ್ಙಾನ ಇಲಾಖೆಯ ಸಹಾಯಕ ನಿದೇರ್ಶಕ ರಾಮ್ ಜಿ ನಾಯ್ಕ್ ಇದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…