Featured

ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. : ಕೆ.ಎಸ್.ಈಶ್ವರಪ್ಪ – Vishwanews24

ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿಯೇ ಮಾಡಲು ಆಗುತ್ತಿಲ್ಲ ಎಂಬುವುದನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಹತ್ಯೆ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ತಪ್ಪಿಲ್ಲದ ಹಿಂದುತ್ವವಾದಿಗಳನ್ನು ಕೆಲವು ಮುಸಲ್ಮಾನ್ ಗೂಂಡಾಗಳು ಕಗ್ಗೋಲೆ ಮಾಡುವುದು, ಹಲ್ಲೆ ಮಾಡುವುದು ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡನೆ ಮಾಡುತ್ತೇನೆ. ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಖಂಡನೆ ಮಾಡಬೇಕು. ಯಾರೂ ಇವರಿಗೆ ಬೆಂಬಲ ಕೊಡಬಾರದು. ಕೊಲೆಗಡುಕರನ್ನು ಬಂಧಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಸರ್ಕಾರ ಬಲಹೀನ, ದೌರ್ಬಲ್ಯ ಅಲ್ಲ. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಶಾಂತಿ ಕಾಪಾಡಲು ಹಿಂದೂಗಳು ಸಂಯಮದಿಂದ ನಡೆದುಕೊಂಡು ಹೋಗುತ್ತಿದ್ದಾರೆ. ಎಷ್ಟು ದಿನದಿಂದ ಶಾಂತಿಯಿಂದ ಇರಲು ಸಾಧ್ಯ. ಸಿಎಂ ಜೊತೆ ಮಾತನಾಡುತ್ತೇನೆ. ಕೊಲೆಗಟುಕರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಮನವಿ ಮಾಡುತ್ತೇನೆ ಎಂದಿದ್ದಾರೆ.

ಹಿಂದೂಗಳು ಶಾಂತಿ ಪ್ರಿಯರು ಅದನ್ನು ಪರೀಕ್ಷೆ ಮಾಡಲು ಹೋಗಬೇಡಿ. ಕೊಲೆಗೆ ಕೊಲೆ ಎಂಬುದು ನಮ್ಮ ಉದ್ದೇಶ ಅಲ್ಲ. ಆ ರೀತಿಯಾದರೆ ರಾಜ್ಯದಲ್ಲಿ ರಕ್ತಪಾತವೇ ಆಗುತ್ತದೆ. ಅವರ ಮನಸ್ಥಿತಿ ಬದಲಾವಣೆ ಮಾಡಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಕೊಲೆಯಾದಾಗ ಹಿಂದೂಗಳನ್ನೇ ಜೈಲಿಗೆ ಕಳುಹಿಸುತ್ತಿದ್ದರು. ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. ನಮ್ಮ ಕಾರ್ಯಕರ್ತರನ್ನು ಹುಡುಕಿ, ಹುಡುಕಿ ಕೊಲೆ ಮಾಡುತ್ತಿದ್ದಾರೆ. ಆದರೆ ರಾಜೀನಾಮೆ ಅದಕ್ಕೆ ಪರಿಹಾರವಲ್ಲ. ಕೊಲೆಗಡುಕರಿಗೆ ಕೊಡುತ್ತಿರುವ ಶಿಕ್ಷೆ ಸಾಕಾಗುತ್ತಿಲ್ಲ. ಕಠಿಣ ಶಿಕ್ಷೆ ಕೊಡುವ ಬಗ್ಗೆ ಕ್ರಮ ವಹಿಸಬೇಕಿದೆ. ಹಿಂದುತ್ವ ಸಿದ್ದಾಂತವನ್ನು ದುರ್ಬಲ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದುತ್ವವಾದಿಗಳು ಎದುರುವ ಪ್ರಶ್ನೆಯೇ ಇಲ್ಲ ಎಂದು ಹರಿಹಾಯ್ದಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

6 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

6 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

6 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

7 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago