Featured

ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ : ರಮೇಶ್ ಜಾರಕಿಹೊಳಿ -Vishwanews24

ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ : ರಮೇಶ್ ಜಾರಕಿಹೊಳಿ -Vishwanews24

ಬೆಳಗಾವಿ: ನನ್ನ ಮಿತ್ರ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಕ್ಕೆ ತುಂಬಾ ಸಂತಸವಾಗಿದೆ, ಅದೆಷ್ಟು ಸಂತೋಷವಾಗಿದೆ ಎಂದರೆ ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ ಎಂದು ಮಾಜಿ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ನೂತನ ಸಿಎಮ್ ಹಾಗು ನೂತನ ಸಚಿವ ಸಂಪುಟ ರಚನೆಯತ್ತ ರಾಜಕೀಯ ‌ಬೆಳವಣಿಗೆಗಳ‌‌ ನಡುವೆ ತಮ್ಮದೆ ಆದ ಲೆಕ್ಕಾಚಾರದಲ್ಲಿದ್ದ ಜಾರಕಿಹೊಳಿ ಬ್ರದರ್ಸ್ ಅಲ್ಲಲ್ಲಿ ಅಸಮಾಧಾನಗೊಂಡ ಸಚಿವರ ಭೇಟಿಗೆ ಮುಂದಾಗಿದ್ದಾರೆ ಎಂಬ ರಾಜಕೀಯ ಮಾತುಗಳು ಇತ್ತೀಚೆಗೆ ಕೇಳಿ ಬರುತ್ತೀವೆ. ಈ ನಡುವೆ ಅವರು ಹುಬ್ಬಳ್ಳಿ, ದೆಹಲಿ, ಬೆಂಗಳೂರು ಸುತ್ತಾಡುತ್ತಿರುವದಕ್ಕೆ ಸಾಕಷ್ಟು ರಾಜಕೀಯ ಚಟುವಟಿಕೆಗಳಿಗೆ ಎಡೆ ಮಾಡಿಕೊಟ್ಟಿದೆ.

ಕೆಲವು ದಿನಗಳ ಬಳಿಕ ಶುಕ್ರವಾರ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಳಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಸಾಂಬ್ರಾ ಏರಫೊರ್ಟನಲ್ಲಿ ಮಾತ್ನಾಡಿದರು. ಈ ವೇಳೆ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಮಿತ್ರ ಮಂಡಳಿ ಸದಸ್ಯರಿಗೆ ಸಚಿವ ಸ್ಥಾನ ನೀಡದ ವಿಚಾರದ ಕುರಿತು ಮಾತ್ನಾಡಿದರು. ಈ ಬಗ್ಗೆ ನಾನು ನಾಳೆ ಅಥಣಿ ಗೆ ಹೋಗಿ ಮಾತನಾಡುತ್ತೇನೆ ಎಂದಷ್ಟೇ ತಿಳಿಸಿದರು.

ಇದೆ ವೇಳೆ ಮುಂದಿನ ದಿನಗಳಲ್ಲಿ ಹೈಕಮಾಂಡ್ ಎಲ್ಲವನ್ನೂ ಸರಿಪಡಿಸುತ್ತೆ.‌ನಾವು ಯಾರೂ ಈಗ ಅಂಸತೋಷರಿಲ್ಲ, ಎಲ್ಲರೂ ಚನ್ನಾಗಿ ಖುಷಿಯಿಂದ ಇದ್ದೇವೆ ಎಂದು ತಿಳಿಸಿದರು.

ಸಹೋದರ ಬಾಲಚಂದ್ರ ಜಾರಕಿಹೊಳಿಗೂ ಸಚಿವ ಸ್ಥಾನ ನೀಡದ ವಿಚಾರ ಮಾತ್ನಾಡಿದ ಅವರು ನಮ್ಮ‌ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೆವೆ ಈಗ ಏನಿದ್ದರೂ ನಮ್ಮದು 2023ರ ಚುನಾವಣೆಗೆ ತಯಾರಿ ಮಾಡ್ತಿದ್ದೇವೆ ಆ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದೇವೆ ಎಂದು ತಿಳಿಸಿದರು. ಮತ್ತು ಪೂರ್ಣ ಪ್ರಮಾಣದ ಬಹುಮತದೊಂದಿಗೆ 2023ರಲ್ಲಿ ಸರ್ಕಾರ ತರುವ ಗುರಿ ಇದೆ ಎಂದು ಭರವಸೆ ಮಾತುಗಳ್ನಾಡಿದರು.

ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು ನಾನು ದೆಹಲಿಯಲ್ಲಿ ಯಾವ ವರಿಷ್ಠರನ್ನು ಭೇಟಿಯಾಗಿಲ್ಲ, ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ ಅಷ್ಟೇ ಅಂತಾ ಹೇಳಿ ನುಣಚಿಕೊಂಡರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago