ಮೈಸೂರು: ಗುರುವಾರ ಮಡಿಕೇರಿ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಹಿಂದೂ ಸಂಘಟನೆಯವರು ಮೊಟ್ಟೆ ಒಡೆದು ಅಗೌರವ ತೋರಿದ್ದರು. ಈ ಘಟನೆಗೆ ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿ, ಜೆಡಿಎಸ್ ಕೂಡಾ ಅಸಮಾಧಾನ ವ್ಯಕ್ತಪಡಿಸಿತ್ತು. ಇದರ ಹಿನ್ನೆಲೆ ಶುಕ್ರವಾರ ಮಾತನಾಡಿದ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮಾತನಾಡಿದ ಯತೀಂದ್ರ, ಸಾವರ್ಕರ್ ಬಗ್ಗೆ ಮಾತನಾಡಿದ್ದಕ್ಕೆ ನಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆಯಿದೆ. ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು ಬಂದಿವೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ವಿರೋಧ ಪಕ್ಷದ ನಾಯಕರುಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ಇನ್ನು ಜನರಿಗೆ ಹೇಗೆ ಭದ್ರತೆ ಕೊಡುತ್ತಾರೋ ಗೊತ್ತಿಲ್ಲ. ಜೊತೆಗೆ ಮೊಟ್ಟೆ ಒಡೆಸಿ ಹೇಡಿ ಕೃತ್ಯ ಮಾಡಿದೆ ಎಂದು ಕಿಡಿ ಕಾರಿದರು.
ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡ ಕಾಫಿನಾಡು ಚಂದು – Vishwanews24
ಬಿಜೆಪಿ ಸರ್ಕಾರ ಮೊದಲು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಬಗ್ಗೆ ಗಮನ ಹರಿಸಬೇಕು. ಅದು ಬಿಟ್ಟು ವಿರೋಧ ಪಕ್ಷಗಳು ನೀಡುವ ಸಣ್ಣ ಪುಟ್ಟ ಹೇಳಿಕೆಗಳನ್ನು ಹಿಡಿದುಕೊಂಡು, ಅನಗತ್ಯ ಗೊಂದಲ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದೆ ಎಂದರು.
ಟೆರರಿಸ್ಟ್ಗಳು ಕೂಡಾ ದೇಶ ಪ್ರೇಮಿಗಳೇ ಆಗಿರುತ್ತಾರೆ. ಆದರೆ ಅವರು ಹಿಡಿಯುವ ದಾರಿ ತಪ್ಪಲ್ವಾ? ಅದರಂತೆಯೇ ಸಾವರ್ಕರ್ ಕೂಡಾ ದೇಶ ಪ್ರೇಮಿಯೇ ಆಗಿರಬಹುದು. ಆದರೆ ಆ ದೇಶ ಪ್ರೇಮವನ್ನು ವ್ಯಕ್ತಪಡಿಸುವುದಕ್ಕೋಸ್ಕರ ಹಿಂದೂಯೇತರ ಪ್ರಜೆಗಳನ್ನು ದೇಶದ ಭಾಗವಾಗಿರಬಾರದು, ಅವರು 2ನೇ ದರ್ಜೆಯ ಪ್ರಜೆಗಳಾಗಿರಬೇಕು ಹಾಗೂ ಅವರನ್ನು ದ್ವೇಷಿಸುವುದು ಈ ದೇಶಕ್ಕೆ ಮಾರಕ ಎಂದು ತಿಳಿಸಿದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…