ಮೈಸೂರು: ನಮ್ಮ ತಂದೆಯೇ 5 ವರ್ಷ ಸಿಎಂ. ಖುದ್ದು ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಈ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ. ಸಿಎಂ ಖುದ್ದಾಗಿ ಹೇಳಿದ ಮೇಲೆ ಮತ್ತೆ ಆ ಬಗ್ಗೆ ಚರ್ಚೆಯೇ ಇಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ತಂದೆಯ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎರಡೂವರೆ ವರ್ಷದಿಂದ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ನಮ್ಮ ತಂದೆಯ ಮಾತೇ ನನ್ನ ಮಾತು ಕೂಡ. ಸಚಿವ ಸಂಪುಟ ಪುನಾರಚನೆಗಾಗಿ ಶಾಸಕರು ದೆಹಲಿಗೆ ಹೋಗಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವುದಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧವೇ ಇಲ್ಲ. ಉಪಚುನಾವಣೆ ಫಲಿತಾಂಶಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧ ಇಲ್ಲ. ಸರ್ಕಾರವೂ ಭದ್ರವಾಗಿದೆ, ಸಿಎಂ ಸ್ಥಾನವೂ ಭದ್ರವಾಗಿದೆ. ನಾನು ಎಷ್ಟು ಭಾರಿ ಅಂತ ಇದನ್ನು ಸ್ಪಷ್ಟಪಡಿಸಲಿ ಹೇಳಿ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:
ಸರ್ಕಾರಕ್ಕೆ ಎರಡೂವರೆ ವರ್ಷ ಆಗಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಕೇಳುತ್ತಿದ್ದಾರೆ. ಸಂಪುಟ ಪುನಾರಚನೆ ಮಾಡಬೇಕಿದೆ. ಯಾವಾಗ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…