Featured

ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ  ಬ್ಯಾಟಿಂಗ್

ಮೈಸೂರು: ನಮ್ಮ ತಂದೆಯೇ 5 ವರ್ಷ ಸಿಎಂ. ಖುದ್ದು ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಈ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ. ಸಿಎಂ ಖುದ್ದಾಗಿ ಹೇಳಿದ ಮೇಲೆ ಮತ್ತೆ ಆ ಬಗ್ಗೆ ಚರ್ಚೆಯೇ ಇಲ್ಲ ಎಂದು ಸಿಎಂ  ಪುತ್ರ ಯತೀಂದ್ರ ಸಿದ್ದರಾಮಯ್ಯ  ಮತ್ತೊಮ್ಮೆ ತಂದೆಯ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎರಡೂವರೆ ವರ್ಷದಿಂದ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ನಮ್ಮ ತಂದೆಯ ಮಾತೇ ನನ್ನ ಮಾತು ಕೂಡ. ಸಚಿವ ಸಂಪುಟ ಪುನಾರಚನೆಗಾಗಿ ಶಾಸಕರು ದೆಹಲಿಗೆ ಹೋಗಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವುದಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧವೇ ಇಲ್ಲ. ಉಪಚುನಾವಣೆ ಫಲಿತಾಂಶಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧ ಇಲ್ಲ. ಸರ್ಕಾರವೂ ಭದ್ರವಾಗಿದೆ, ಸಿಎಂ ಸ್ಥಾನವೂ ಭದ್ರವಾಗಿದೆ. ನಾನು ಎಷ್ಟು ಭಾರಿ ಅಂತ ಇದನ್ನು ಸ್ಪಷ್ಟಪಡಿಸಲಿ ಹೇಳಿ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:

ಸರ್ಕಾರಕ್ಕೆ ಎರಡೂವರೆ ವರ್ಷ ಆಗಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಕೇಳುತ್ತಿದ್ದಾರೆ. ಸಂಪುಟ ಪುನಾರಚನೆ ಮಾಡಬೇಕಿದೆ. ಯಾವಾಗ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

12 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago