ಮೈಸೂರು: ನಮ್ಮ ತಂದೆಯೇ 5 ವರ್ಷ ಸಿಎಂ. ಖುದ್ದು ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಈ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ. ಸಿಎಂ ಖುದ್ದಾಗಿ ಹೇಳಿದ ಮೇಲೆ ಮತ್ತೆ ಆ ಬಗ್ಗೆ ಚರ್ಚೆಯೇ ಇಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ತಂದೆಯ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎರಡೂವರೆ ವರ್ಷದಿಂದ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ನಮ್ಮ ತಂದೆಯ ಮಾತೇ ನನ್ನ ಮಾತು ಕೂಡ. ಸಚಿವ ಸಂಪುಟ ಪುನಾರಚನೆಗಾಗಿ ಶಾಸಕರು ದೆಹಲಿಗೆ ಹೋಗಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವುದಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧವೇ ಇಲ್ಲ. ಉಪಚುನಾವಣೆ ಫಲಿತಾಂಶಕ್ಕೂ ಸಿಎಂ ಸ್ಥಾನಕ್ಕೂ ಸಂಬಂಧ ಇಲ್ಲ. ಸರ್ಕಾರವೂ ಭದ್ರವಾಗಿದೆ, ಸಿಎಂ ಸ್ಥಾನವೂ ಭದ್ರವಾಗಿದೆ. ನಾನು ಎಷ್ಟು ಭಾರಿ ಅಂತ ಇದನ್ನು ಸ್ಪಷ್ಟಪಡಿಸಲಿ ಹೇಳಿ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:
ಸರ್ಕಾರಕ್ಕೆ ಎರಡೂವರೆ ವರ್ಷ ಆಗಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಕೇಳುತ್ತಿದ್ದಾರೆ. ಸಂಪುಟ ಪುನಾರಚನೆ ಮಾಡಬೇಕಿದೆ. ಯಾವಾಗ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…
ಉಡುಪಿ: ಬ್ಯಾಡ್ಮಿಂಟನ್ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…