ಬೆಂಗಳೂರು: ಮಂಗಳೂರು ಬಾಂಬ್ ಸ್ಫೋಟ ಉಗ್ರ ಕೃತ್ಯ ಎಂದು ದೃಢಪಟ್ಟರೂ ಶಾರೀಕ್ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದು ಬಂದಿರಲಿಲ್ಲ. ಆದರೆ ಈಗ ʼಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ʼ ಹೆಸರಿನ ಸಂಘಟನೆಯೊಂದು ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.
ಸಾಮಾಜಿಕ ಜಾಲತಾಣದಲ್ಲಿಸಂಘಟನೆ ಅರೆಬಿಕ್ ಭಾಷೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ. ನಮ್ಮ ದಾಳಿ ಕದ್ರಿ ದೇವಸ್ಥಾನ ಆಗಿತ್ತು. ಆದರೆ ಉದ್ದೇಶಿತ ಗುರಿಯನ್ನು ತಲುಪುವ ಮೊದಲೇ ಬಾಂಬ್ ಸ್ಫೋಟಗೊಂಡಿದೆ ಸಂಘಟನೆ ಹೇಳಿಕೊಂಡಿದೆ.
ಶಾರೀಕ್ ಪಂಪ್ವೆಲ್ ಬಳಿ ಬಾಂಬ್ ಸ್ಫೋಟ ನಡೆಸಲು ಪ್ಲ್ಯಾನ್ ನಡೆಸಿದ್ದ ಎಂಬ ಮಾಹಿತಿ ಆರಂಭದಲ್ಲಿ ಸಿಕ್ಕಿತ್ತು. ಆದರೆ ಈಗ ಕದ್ರಿ ದೇವಸ್ಥಾನ ಉಗ್ರರ ಟಾರ್ಗೆಟ್ ಆಗಿದ್ದರಿಂದ ಈ ಪ್ರಕರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದನ್ನೂ ಓದಿ: ಕಾಂತಾರ’ ವಿವಾದಾತ್ಮಕ ಹೇಳಿಕೆ ..ಚೇತನ್ ವಿರುದ್ಧದ ಎಫ್.ಐ.ಆರ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್ – Vishwanews24
ನ.23ರಂದು ಪ್ರಕಟಿಸಲಾದ ಅರೆಬಿಕ್ ಭಾಷೆಯಲ್ಲಿರುವ “Majlis Almuqawamat Al’islamia” ಪೋಸ್ಟ್ ಜೊತೆ ಬಾಂಬ್ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಎರಡು ಹಳೆಯ ಫೋಟೋಗಳನ್ನು ಅಪ್ಲೋಡ್ ಮಾಡಲಾಗಿದೆ.
ಅಷ್ಟೇ ಅಲ್ಲದೇ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಲಾಗಿದೆ. ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.
ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪದ ನಡೆಯುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.
ಕಿಡ್ನ್ಯಾಪ್ ಮಾಡಿ , ಬಲವಂತವಾಗಿ ಆಲ್ಕೋಹಾಲ್ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24
ಈ ಸಂಘಟನೆ ಇದೆಯೋ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ. ಕರ್ನಾಟಕ ಪೊಲೀಸ್ ಈ ಸಂಘಟನೆ ಅಸ್ತಿತ್ವದಲ್ಲಿದೆಯೇ ಇದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಕೇಂದ್ರ ಗೃಹ ಇಲಾಖೆಯ ಸಹಾಯವನ್ನು ಕೇಳಿದೆ.
ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನ 10ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಮಂಗಳೂರಿನ ಪ್ರಸಿದ್ಧ ದೇವಸ್ಥಾನವಾಗಿದೆ. ಮಂಗಳೂರು ಪಂಪ್ವೆಲ್ನಿಂದ 5 ಕಿ.ಮೀ ದೂರದಲ್ಲಿದ್ದರೆ ಸ್ಫೋಟ ನಡೆದ ಸ್ಥಳದಿಂದ 4.5 ಕಿ.ಮೀ ದೂರದಲ್ಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…