Featured

ನಮ್ಮ ದಾಳಿ ಕದ್ರಿ ದೇವಸ್ಥಾನ , ಗುರಿ ತಲುಪುವ ಮೊದಲೇ ಬಾಂಬ್‌ ಸ್ಫೋಟ ; ಸಾಮಾಜಿಕ ಜಾಲತಾಣದಲ್ಲಿ ಅರೆಬಿಕ್‌ ಭಾಷೆಯಲ್ಲಿ ಪೋಸ್ಟ್‌ – Vishwanews24

ಮಂಗಳೂರು ಬಾಂಬ್‌ ಸ್ಫೋಟ : ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ʼ ಹೆಸರಿನ ಸಂಘಟನೆ

ನಮ್ಮ ದಾಳಿ ಕದ್ರಿ ದೇವಸ್ಥಾನ , ಗುರಿ ತಲುಪುವ ಮೊದಲೇ ಬಾಂಬ್‌ ಸ್ಫೋಟ ; ಸಾಮಾಜಿಕ ಜಾಲತಾಣದಲ್ಲಿ ಅರೆಬಿಕ್‌ ಭಾಷೆಯಲ್ಲಿ ಪೋಸ್ಟ್‌

ಬೆಂಗಳೂರು: ಮಂಗಳೂರು ಬಾಂಬ್‌ ಸ್ಫೋಟ ಉಗ್ರ ಕೃತ್ಯ ಎಂದು ದೃಢಪಟ್ಟರೂ ಶಾರೀಕ್‌ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದು ಬಂದಿರಲಿಲ್ಲ. ಆದರೆ ಈಗ ʼಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ʼ ಹೆಸರಿನ ಸಂಘಟನೆಯೊಂದು ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.

ಸಾಮಾಜಿಕ ಜಾಲತಾಣದಲ್ಲಿಸಂಘಟನೆ ಅರೆಬಿಕ್‌ ಭಾಷೆಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ನಮ್ಮ ದಾಳಿ ಕದ್ರಿ ದೇವಸ್ಥಾನ ಆಗಿತ್ತು. ಆದರೆ ಉದ್ದೇಶಿತ ಗುರಿಯನ್ನು ತಲುಪುವ ಮೊದಲೇ ಬಾಂಬ್‌ ಸ್ಫೋಟಗೊಂಡಿದೆ ಸಂಘಟನೆ ಹೇಳಿಕೊಂಡಿದೆ.

ಶಾರೀಕ್‌ ಪಂಪ್‌ವೆಲ್‌ ಬಳಿ ಬಾಂಬ್‌ ಸ್ಫೋಟ ನಡೆಸಲು ಪ್ಲ್ಯಾನ್‌ ನಡೆಸಿದ್ದ ಎಂಬ ಮಾಹಿತಿ ಆರಂಭದಲ್ಲಿ ಸಿಕ್ಕಿತ್ತು. ಆದರೆ ಈಗ ಕದ್ರಿ ದೇವಸ್ಥಾನ ಉಗ್ರರ ಟಾರ್ಗೆಟ್‌ ಆಗಿದ್ದರಿಂದ ಈ ಪ್ರಕರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದನ್ನೂ ಓದಿ: ಕಾಂತಾರ’ ವಿವಾದಾತ್ಮಕ ಹೇಳಿಕೆ ..ಚೇತನ್ ವಿರುದ್ಧದ ಎಫ್.ಐ.ಆರ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್ – Vishwanews24

ನ.23ರಂದು ಪ್ರಕಟಿಸಲಾದ ಅರೆಬಿಕ್‌ ಭಾಷೆಯಲ್ಲಿರುವ “Majlis Almuqawamat Al’islamia” ಪೋಸ್ಟ್‌ ಜೊತೆ ಬಾಂಬ್‌ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ ಎರಡು ಹಳೆಯ ಫೋಟೋಗಳನ್ನು ಅಪ್ಲೋಡ್‌ ಮಾಡಲಾಗಿದೆ.

ಅಷ್ಟೇ ಅಲ್ಲದೇ ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ಬೆದರಿಕೆ ಹಾಕಲಾಗಿದೆ. ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.

ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪದ ನಡೆಯುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.

ಕಿಡ್ನ್ಯಾಪ್‌ ಮಾಡಿ , ಬಲವಂತವಾಗಿ ಆಲ್ಕೋಹಾಲ್‌ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24

ಈ ಸಂಘಟನೆ ಇದೆಯೋ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ. ಕರ್ನಾಟಕ ಪೊಲೀಸ್‌ ಈ ಸಂಘಟನೆ ಅಸ್ತಿತ್ವದಲ್ಲಿದೆಯೇ ಇದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಕೇಂದ್ರ ಗೃಹ ಇಲಾಖೆಯ ಸಹಾಯವನ್ನು ಕೇಳಿದೆ.

ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನ 10ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಮಂಗಳೂರಿನ ಪ್ರಸಿದ್ಧ ದೇವಸ್ಥಾನವಾಗಿದೆ. ಮಂಗಳೂರು ಪಂಪ್‌ವೆಲ್‌ನಿಂದ 5 ಕಿ.ಮೀ ದೂರದಲ್ಲಿದ್ದರೆ ಸ್ಫೋಟ ನಡೆದ ಸ್ಥಳದಿಂದ 4.5 ಕಿ.ಮೀ ದೂರದಲ್ಲಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

10 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago