ಬೆಂಗಳೂರು: ಮಂಗಳೂರು ಬಾಂಬ್ ಸ್ಫೋಟ ಉಗ್ರ ಕೃತ್ಯ ಎಂದು ದೃಢಪಟ್ಟರೂ ಶಾರೀಕ್ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದು ಬಂದಿರಲಿಲ್ಲ. ಆದರೆ ಈಗ ʼಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ʼ ಹೆಸರಿನ ಸಂಘಟನೆಯೊಂದು ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.
ಸಾಮಾಜಿಕ ಜಾಲತಾಣದಲ್ಲಿಸಂಘಟನೆ ಅರೆಬಿಕ್ ಭಾಷೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ. ನಮ್ಮ ದಾಳಿ ಕದ್ರಿ ದೇವಸ್ಥಾನ ಆಗಿತ್ತು. ಆದರೆ ಉದ್ದೇಶಿತ ಗುರಿಯನ್ನು ತಲುಪುವ ಮೊದಲೇ ಬಾಂಬ್ ಸ್ಫೋಟಗೊಂಡಿದೆ ಸಂಘಟನೆ ಹೇಳಿಕೊಂಡಿದೆ.
ಶಾರೀಕ್ ಪಂಪ್ವೆಲ್ ಬಳಿ ಬಾಂಬ್ ಸ್ಫೋಟ ನಡೆಸಲು ಪ್ಲ್ಯಾನ್ ನಡೆಸಿದ್ದ ಎಂಬ ಮಾಹಿತಿ ಆರಂಭದಲ್ಲಿ ಸಿಕ್ಕಿತ್ತು. ಆದರೆ ಈಗ ಕದ್ರಿ ದೇವಸ್ಥಾನ ಉಗ್ರರ ಟಾರ್ಗೆಟ್ ಆಗಿದ್ದರಿಂದ ಈ ಪ್ರಕರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಇದನ್ನೂ ಓದಿ: ಕಾಂತಾರ’ ವಿವಾದಾತ್ಮಕ ಹೇಳಿಕೆ ..ಚೇತನ್ ವಿರುದ್ಧದ ಎಫ್.ಐ.ಆರ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್ – Vishwanews24
ನ.23ರಂದು ಪ್ರಕಟಿಸಲಾದ ಅರೆಬಿಕ್ ಭಾಷೆಯಲ್ಲಿರುವ “Majlis Almuqawamat Al’islamia” ಪೋಸ್ಟ್ ಜೊತೆ ಬಾಂಬ್ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಎರಡು ಹಳೆಯ ಫೋಟೋಗಳನ್ನು ಅಪ್ಲೋಡ್ ಮಾಡಲಾಗಿದೆ.
ಅಷ್ಟೇ ಅಲ್ಲದೇ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಲಾಗಿದೆ. ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.
ರಾಜ್ಯದಲ್ಲಿ ಗುಂಪು ಹತ್ಯೆ, ದಬ್ಬಾಳಿಕೆಯ ಕಾನೂನುಗಳು ಮತ್ತು ಶಾಸನಗಳು ಮತ್ತು ಧರ್ಮದಲ್ಲಿ ಹಸ್ತಕ್ಷೇಪದ ನಡೆಯುವ ಮೂಲಕ ನಮ್ಮ ಮೇಲೆ ಯುದ್ಧ ಸಾರಲಾಗಿದೆ. ಈ ಯುದ್ಧಕ್ಕೆ ಪ್ರತಿಯಾಗಿ ದಾಳಿ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.
ಕಿಡ್ನ್ಯಾಪ್ ಮಾಡಿ , ಬಲವಂತವಾಗಿ ಆಲ್ಕೋಹಾಲ್ ಕುಡಿಸಿ ನಾಲ್ವರು ಮಹಿಳೆಯರಿಂದ ಯುವಕನ ಅತ್ಯಾಚಾರ – Vishwanews24
ಈ ಸಂಘಟನೆ ಇದೆಯೋ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ. ಕರ್ನಾಟಕ ಪೊಲೀಸ್ ಈ ಸಂಘಟನೆ ಅಸ್ತಿತ್ವದಲ್ಲಿದೆಯೇ ಇದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಕೇಂದ್ರ ಗೃಹ ಇಲಾಖೆಯ ಸಹಾಯವನ್ನು ಕೇಳಿದೆ.
ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನ 10ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಮಂಗಳೂರಿನ ಪ್ರಸಿದ್ಧ ದೇವಸ್ಥಾನವಾಗಿದೆ. ಮಂಗಳೂರು ಪಂಪ್ವೆಲ್ನಿಂದ 5 ಕಿ.ಮೀ ದೂರದಲ್ಲಿದ್ದರೆ ಸ್ಫೋಟ ನಡೆದ ಸ್ಥಳದಿಂದ 4.5 ಕಿ.ಮೀ ದೂರದಲ್ಲಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…