Featured

ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ.: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ -Vishwanews24

ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ.: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ -Vishwanews24

ಬೆಂಗಳೂರು: ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದಿದ್ದಾರೆ.

ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ ಎಂದು ಹೇಳಿದ್ದಾರೆ.

ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದಿದ್ದಾರೆ.

ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ಕನ್ನಡಿಗರೆಂದರೆ -ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ಎಂದು ಉಲ್ಲೇಖಿಸಿದ್ದಾರೆ.

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

23 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

34 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

41 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

57 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago