ಬೆಳಗಾವಿ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಯುವ ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಭಾಗಿಯಾಗಿ, ಮಾತನಾಡಿದ ಅವರು, ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿಯವರ ಮೊಮ್ಮಗ ಆದರೂ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಗುಣಗಾನ ಮಾಡಿದರು.
ತೋರಿಕೆಗೆ ಮಾತ್ರ ದೇಶ ಭಕ್ತಿಯ ಹೆಸರಿನಲ್ಲಿ ಬಿಜೆಪಿ ಯುವಕರನ್ನು ವಂಚಿಸುವ ಕೆಲಸ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿಯವರ ಆದರ್ಶ ಎಲ್ಲಾ ಯುವಕರಿಗೆ ಮಾರ್ಗದರ್ಶಿ ಆಗಬೇಕು ಎಂದು ಹೇಳಿದರು. ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಹರಿಹಾಯ್ದ ಅವರು, ವಾಟ್ಸಾಪ್ ಯೂನಿವರ್ಸಿಟಿ, ಫೇಸ್ಬುಕ್ ಯೂನಿವರ್ಸಿಟಿಯಿಂದ ತಪ್ಪು ಸಂದೇಶ ರವಾನೆ ಆಗ್ತಿದೆ ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ಅವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು, ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆಂದು ಶ್ಲಾಘಿಸಿದ್ರು. ತಾವು ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿ ಮೊಮ್ಮಗ ಆಗಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಅಂತ ಸಚಿನೆ ಶ್ಲಾಘಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…