Featured

ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ : ಕುಮಾರಸ್ವಾಮಿ – Vishwanews24

ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ : ಕುಮಾರಸ್ವಾಮಿ

ಬಾದಾಮಿ: ಐದು ವರ್ಷದ ಅವಧಿಗೆ ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ತಾಲೂಕಿನ ಕುಳಗೇರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಪೂರ್ಣ ಅಧಿಕಾರ ನೀಡಿದರೆ ರಾಜ್ಯದ ಪ್ರತಿ ಗ್ರಾಮಗಳಲ್ಲಿ ಇಂಗ್ಲಿಷ್‌ ಹಾಗೂ ಕನ್ನಡ ಮಾಧ್ಯಮದ ಉಚಿತ ಶಿಕ್ಷಣ. ಪ್ರತಿ ಗ್ರಾಮದಲ್ಲಿ ಉಚಿತ ಆರೋಗ್ಯ, ರೈತರಿಗೆ ಎಕರೆಗೆ 10 ಸಾವಿರ, ಪ್ರತಿ ವರ್ಷ ರೈತರು ಎಲ್ಲಿಯೂ ಸಾಲ ಪಡೆಯಬೇಕಿಲ್ಲ.

ದಿನಕ್ಕೆ 24 ಗಂಟೆ ಉಚಿತ ವಿದ್ಯುತ್‌ ನೀಡುತ್ತೇವೆ ಎಂದರು. ಈಗಾಗಲೇ ಸಾಲ ಮನ್ನಾ ಮಾಡಿ ತೋರಿಸಿದ್ದೇನೆ. ಮಾಜಿ ಶಾಸಕರ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‌ನಿಂದ ರೈತರ ಮೇಲೆ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಬಂದರೆ ಆ ಸಹಕಾರಿ ಬ್ಯಾಂಕ್‌ ತನಿಖೆ ಮಾಡಿಸಿ, ಅದನ್ನು ಮುಚ್ಚಿಸುವ ಕೆಲಸ ಮಾಡುತ್ತೇವೆ. ಪ್ರತಿ ಮನೆಗೆ 5 ಸಾವಿರ ಕೊಡುತ್ತೇವೆ. ನದಿ ತೀರದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಈ ಬಾರಿ ಹನಮಂತ ಮಾವಿನಮರದಗೆ ಆಶೀರ್ವಾದ ಮಾಡಿ. ಬಾದಾಮಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ, ಕಾಂಕ್ರಿಟ್‌ ರಸ್ತೆ, ಒಳಚರಂಡಿ, ಮೂಲಭೂತ ಸೌಕರ್ಯ ಒದಗಿಸುತ್ತೇವೆ ಎಂದರು.

ಚುನಾವಣೆಯಲ್ಲಿ ಮತ ಪಡೆದು ಸಿದ್ದರಾಮಯ್ಯ ಹಾಗೂ ಶ್ರೀರಾಮಲು ಈ ಭಾಗಕ್ಕೆ ಬಂದು ಜನರ ಕಷ್ಟಸುಖ ಕೇಳಲಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷವಾದರೂ ಜನರ ಕಷ್ಟ ಪರಿಹಾರವಾಗಿಲ್ಲ. ಒಬ್ಬ ಎಂಎಲ್‌ಎ ಮನೆಯಲ್ಲಿ 8 ಕೋಟಿ ಸಿಗುತ್ತೆ ಅಂದ್ರೆ ನೀವು ಯೋಚನೆ ಮಾಡಿ. ಅಂತಹ ದುಡ್ಡಿನಿಂದ ನಿಮಗೆ ಕುಕ್ಕರ್‌ ಹಂಚುತ್ತಾರೆ. ಆಮಿಷಗಳಿಗೆ ಬಲಿಯಾಗಬೇಡಿರಿ ಎಂದು ಕುಮಾರಸ್ವಾಮಿ ಮತದಾರರಿಗೆ ಮನವಿ ಮಾಡಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago