Featured

ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ : ಕುಮಾರಸ್ವಾಮಿ – Vishwanews24

ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ : ಕುಮಾರಸ್ವಾಮಿ

ಬಾದಾಮಿ: ಐದು ವರ್ಷದ ಅವಧಿಗೆ ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ತಾಲೂಕಿನ ಕುಳಗೇರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಪೂರ್ಣ ಅಧಿಕಾರ ನೀಡಿದರೆ ರಾಜ್ಯದ ಪ್ರತಿ ಗ್ರಾಮಗಳಲ್ಲಿ ಇಂಗ್ಲಿಷ್‌ ಹಾಗೂ ಕನ್ನಡ ಮಾಧ್ಯಮದ ಉಚಿತ ಶಿಕ್ಷಣ. ಪ್ರತಿ ಗ್ರಾಮದಲ್ಲಿ ಉಚಿತ ಆರೋಗ್ಯ, ರೈತರಿಗೆ ಎಕರೆಗೆ 10 ಸಾವಿರ, ಪ್ರತಿ ವರ್ಷ ರೈತರು ಎಲ್ಲಿಯೂ ಸಾಲ ಪಡೆಯಬೇಕಿಲ್ಲ.

ದಿನಕ್ಕೆ 24 ಗಂಟೆ ಉಚಿತ ವಿದ್ಯುತ್‌ ನೀಡುತ್ತೇವೆ ಎಂದರು. ಈಗಾಗಲೇ ಸಾಲ ಮನ್ನಾ ಮಾಡಿ ತೋರಿಸಿದ್ದೇನೆ. ಮಾಜಿ ಶಾಸಕರ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‌ನಿಂದ ರೈತರ ಮೇಲೆ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಬಂದರೆ ಆ ಸಹಕಾರಿ ಬ್ಯಾಂಕ್‌ ತನಿಖೆ ಮಾಡಿಸಿ, ಅದನ್ನು ಮುಚ್ಚಿಸುವ ಕೆಲಸ ಮಾಡುತ್ತೇವೆ. ಪ್ರತಿ ಮನೆಗೆ 5 ಸಾವಿರ ಕೊಡುತ್ತೇವೆ. ನದಿ ತೀರದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಈ ಬಾರಿ ಹನಮಂತ ಮಾವಿನಮರದಗೆ ಆಶೀರ್ವಾದ ಮಾಡಿ. ಬಾದಾಮಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ, ಕಾಂಕ್ರಿಟ್‌ ರಸ್ತೆ, ಒಳಚರಂಡಿ, ಮೂಲಭೂತ ಸೌಕರ್ಯ ಒದಗಿಸುತ್ತೇವೆ ಎಂದರು.

ಚುನಾವಣೆಯಲ್ಲಿ ಮತ ಪಡೆದು ಸಿದ್ದರಾಮಯ್ಯ ಹಾಗೂ ಶ್ರೀರಾಮಲು ಈ ಭಾಗಕ್ಕೆ ಬಂದು ಜನರ ಕಷ್ಟಸುಖ ಕೇಳಲಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷವಾದರೂ ಜನರ ಕಷ್ಟ ಪರಿಹಾರವಾಗಿಲ್ಲ. ಒಬ್ಬ ಎಂಎಲ್‌ಎ ಮನೆಯಲ್ಲಿ 8 ಕೋಟಿ ಸಿಗುತ್ತೆ ಅಂದ್ರೆ ನೀವು ಯೋಚನೆ ಮಾಡಿ. ಅಂತಹ ದುಡ್ಡಿನಿಂದ ನಿಮಗೆ ಕುಕ್ಕರ್‌ ಹಂಚುತ್ತಾರೆ. ಆಮಿಷಗಳಿಗೆ ಬಲಿಯಾಗಬೇಡಿರಿ ಎಂದು ಕುಮಾರಸ್ವಾಮಿ ಮತದಾರರಿಗೆ ಮನವಿ ಮಾಡಿದರು.

 

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

31 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

44 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago