ಬೆಂಗಳೂರು: ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ, ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ, ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿಎಂ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ.
ರೌಡಿ ಶೀಟರ್ ಆಗಿದ್ದಂತ ಸೈಲೆಂಟ್ ಸುನೀಲ್ ಬಿಜೆಪಿ ನಾಯಕರನ್ನು ರಕ್ತದಾನ ಶಿಬಿರಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಮಾಡಿದ್ದರ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪಿಸಿತ್ತು. ಅಲ್ಲದೇ ರೌಡಿಗಳ ತಾಣವಾಗುತ್ತಿದೆ ಬಿಜೆಪಿ ಎಂಬುದಾಗಿ ವಾಗ್ಧಾಳಿ ನಡೆಸಿತ್ತು. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಅವರು ಸೈಲೆಂಟ್ ಸುನಿಲ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದರು. ಈ ಬಳಿಕ ಈಗ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…