Featured

ನಮ್ಮ ಪ್ರಧಾನಿ ಯಾರೆಂಬುದು ಮುಖ್ಯವಲ್ಲ ; ಬಿಜೆಪಿ ಸೋಲಿಸೋದೇ ಮುಖ್ಯ : ಮಮತಾ ದೀದಿ

ನವದೆಹಲಿ:  2019ರ ಚುನಾವಣೆಯಲ್ಲಿ ಎಲ್ಲರೂ ಸಂಘಟಿತರಾಗಿ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯನ್ನ ಸೋಲಿಸುವುದೇ ಮುಖ್ಯ ಅಂತ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಮೂಲಕ ಮಹಾಮೈತ್ರಿ ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಅನ್ನುವ ರಹಸ್ಯವನ್ನ ಬಹಿರಂಗಪಡಿಸುವುದಿಲ್ಲ ಅನ್ನೋ ಸೂಚನೆಯನ್ನ ಅವರು ನೀಡಿದ್ದಾರೆ.

ಸದ್ಯ ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ದೀದಿ, ಇಂದು ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರನ್ನ ಭೇಟಿ ಮಾಡಲಿದ್ದಾರೆ. ಜನವರಿ 19ರಂದು ಕೊಲ್ಕತ್ತಾದಲ್ಲಿ ಆಯೋಜಿಸಿದ್ದು, ಇದಕ್ಕೆ ಬರುವಂತೆ ಎಲ್ಲರಿಗೂ ಮಮತಾ ಆಹ್ವಾನ ನೀಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಮಹಾಮೈತ್ರಿಯ ಬಲ ಪ್ರದರ್ಶನಕ್ಕೆ ದೀದಿ ವೇದಿಕೆ ಸಿದ್ಧಪಡಿಸುತ್ತಿದ್ದಾರೆ.

ಈ ವೇಳೆ ನೀವು ಮುಂದಿನ ಪ್ರಧಾನಿ ಅಭ್ಯರ್ಥಿಯಾ ಅಂತ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವ್ರು, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನ ಸೋಲಿಸುವುದಕ್ಕಾಗಿ ಸಾಮೂಹಿಕ ನಾಯಕತ್ವವಿರುತ್ತದೆ. ನಾನು ವಿರೋಧ ಪಕ್ಷಗಳ ನಾಯಕರನ್ನ ಭೇಟಿಯಾಗುತ್ತೇನೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನೂ ಭೇಟಿಯಾಗಿ ಱಲಿಗೆ ಆಹ್ವಾನಿಸುತ್ತೇನೆ ಅಂತ ತಿಳಿಸಿದರು.

ಆದರೆ, ಜನವರಿಯಲ್ಲಿ ಕೊಲ್ಕತ್ತಾದಲ್ಲಿ ನಡೆಯುವ  ಕೇವಲ ವಿಪಕ್ಷಗಳ, ಮಹಾಮೈತ್ರಿಯ ಬಲ ಪ್ರದರ್ಶನವಷ್ಟೇ ಅಲ್ಲದೆ, ಮಮತಾರ ಬಲ ಪ್ರದರ್ಶನವೂ ಆಗಲಿದೆ ಅಂತ ಹೇಳಲಾಗ್ತಿದೆ. ಈ ಮೂಲಕ ತಾವು ಕೂಡ ಪ್ರಧಾನಿ ಹುದ್ದೆಯ ರೇಸ್​ನಲ್ಲಿದ್ದೇನೆ ಅಂತ ಮಹಾಮೈತ್ರಿ ಕೂಟಕ್ಕೆ ತಿಳಿಸುವುದಕ್ಕೆ ದೀದಿ ಪ್ರಯತ್ನಿಸುತ್ತಿದ್ದಾರೆ ಅಂತ ಹೇಳಲಾಗ್ತಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago