ನವದೆಹಲಿ: 2019ರ ಚುನಾವಣೆಯಲ್ಲಿ ಎಲ್ಲರೂ ಸಂಘಟಿತರಾಗಿ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯನ್ನ ಸೋಲಿಸುವುದೇ ಮುಖ್ಯ ಅಂತ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಮೂಲಕ ಮಹಾಮೈತ್ರಿ ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಅನ್ನುವ ರಹಸ್ಯವನ್ನ ಬಹಿರಂಗಪಡಿಸುವುದಿಲ್ಲ ಅನ್ನೋ ಸೂಚನೆಯನ್ನ ಅವರು ನೀಡಿದ್ದಾರೆ.
ಸದ್ಯ ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ದೀದಿ, ಇಂದು ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರನ್ನ ಭೇಟಿ ಮಾಡಲಿದ್ದಾರೆ. ಜನವರಿ 19ರಂದು ಕೊಲ್ಕತ್ತಾದಲ್ಲಿ ಆಯೋಜಿಸಿದ್ದು, ಇದಕ್ಕೆ ಬರುವಂತೆ ಎಲ್ಲರಿಗೂ ಮಮತಾ ಆಹ್ವಾನ ನೀಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಮಹಾಮೈತ್ರಿಯ ಬಲ ಪ್ರದರ್ಶನಕ್ಕೆ ದೀದಿ ವೇದಿಕೆ ಸಿದ್ಧಪಡಿಸುತ್ತಿದ್ದಾರೆ.
ಈ ವೇಳೆ ನೀವು ಮುಂದಿನ ಪ್ರಧಾನಿ ಅಭ್ಯರ್ಥಿಯಾ ಅಂತ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವ್ರು, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನ ಸೋಲಿಸುವುದಕ್ಕಾಗಿ ಸಾಮೂಹಿಕ ನಾಯಕತ್ವವಿರುತ್ತದೆ. ನಾನು ವಿರೋಧ ಪಕ್ಷಗಳ ನಾಯಕರನ್ನ ಭೇಟಿಯಾಗುತ್ತೇನೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನೂ ಭೇಟಿಯಾಗಿ ಱಲಿಗೆ ಆಹ್ವಾನಿಸುತ್ತೇನೆ ಅಂತ ತಿಳಿಸಿದರು.
ಆದರೆ, ಜನವರಿಯಲ್ಲಿ ಕೊಲ್ಕತ್ತಾದಲ್ಲಿ ನಡೆಯುವ ಕೇವಲ ವಿಪಕ್ಷಗಳ, ಮಹಾಮೈತ್ರಿಯ ಬಲ ಪ್ರದರ್ಶನವಷ್ಟೇ ಅಲ್ಲದೆ, ಮಮತಾರ ಬಲ ಪ್ರದರ್ಶನವೂ ಆಗಲಿದೆ ಅಂತ ಹೇಳಲಾಗ್ತಿದೆ. ಈ ಮೂಲಕ ತಾವು ಕೂಡ ಪ್ರಧಾನಿ ಹುದ್ದೆಯ ರೇಸ್ನಲ್ಲಿದ್ದೇನೆ ಅಂತ ಮಹಾಮೈತ್ರಿ ಕೂಟಕ್ಕೆ ತಿಳಿಸುವುದಕ್ಕೆ ದೀದಿ ಪ್ರಯತ್ನಿಸುತ್ತಿದ್ದಾರೆ ಅಂತ ಹೇಳಲಾಗ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…