ನವದೆಹಲಿ: 2019ರ ಚುನಾವಣೆಯಲ್ಲಿ ಎಲ್ಲರೂ ಸಂಘಟಿತರಾಗಿ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯನ್ನ ಸೋಲಿಸುವುದೇ ಮುಖ್ಯ ಅಂತ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಮೂಲಕ ಮಹಾಮೈತ್ರಿ ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಅನ್ನುವ ರಹಸ್ಯವನ್ನ ಬಹಿರಂಗಪಡಿಸುವುದಿಲ್ಲ ಅನ್ನೋ ಸೂಚನೆಯನ್ನ ಅವರು ನೀಡಿದ್ದಾರೆ.
ಸದ್ಯ ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ದೀದಿ, ಇಂದು ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರನ್ನ ಭೇಟಿ ಮಾಡಲಿದ್ದಾರೆ. ಜನವರಿ 19ರಂದು ಕೊಲ್ಕತ್ತಾದಲ್ಲಿ ಆಯೋಜಿಸಿದ್ದು, ಇದಕ್ಕೆ ಬರುವಂತೆ ಎಲ್ಲರಿಗೂ ಮಮತಾ ಆಹ್ವಾನ ನೀಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಮಹಾಮೈತ್ರಿಯ ಬಲ ಪ್ರದರ್ಶನಕ್ಕೆ ದೀದಿ ವೇದಿಕೆ ಸಿದ್ಧಪಡಿಸುತ್ತಿದ್ದಾರೆ.
ಈ ವೇಳೆ ನೀವು ಮುಂದಿನ ಪ್ರಧಾನಿ ಅಭ್ಯರ್ಥಿಯಾ ಅಂತ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವ್ರು, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನ ಸೋಲಿಸುವುದಕ್ಕಾಗಿ ಸಾಮೂಹಿಕ ನಾಯಕತ್ವವಿರುತ್ತದೆ. ನಾನು ವಿರೋಧ ಪಕ್ಷಗಳ ನಾಯಕರನ್ನ ಭೇಟಿಯಾಗುತ್ತೇನೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನೂ ಭೇಟಿಯಾಗಿ ಱಲಿಗೆ ಆಹ್ವಾನಿಸುತ್ತೇನೆ ಅಂತ ತಿಳಿಸಿದರು.
ಆದರೆ, ಜನವರಿಯಲ್ಲಿ ಕೊಲ್ಕತ್ತಾದಲ್ಲಿ ನಡೆಯುವ ಕೇವಲ ವಿಪಕ್ಷಗಳ, ಮಹಾಮೈತ್ರಿಯ ಬಲ ಪ್ರದರ್ಶನವಷ್ಟೇ ಅಲ್ಲದೆ, ಮಮತಾರ ಬಲ ಪ್ರದರ್ಶನವೂ ಆಗಲಿದೆ ಅಂತ ಹೇಳಲಾಗ್ತಿದೆ. ಈ ಮೂಲಕ ತಾವು ಕೂಡ ಪ್ರಧಾನಿ ಹುದ್ದೆಯ ರೇಸ್ನಲ್ಲಿದ್ದೇನೆ ಅಂತ ಮಹಾಮೈತ್ರಿ ಕೂಟಕ್ಕೆ ತಿಳಿಸುವುದಕ್ಕೆ ದೀದಿ ಪ್ರಯತ್ನಿಸುತ್ತಿದ್ದಾರೆ ಅಂತ ಹೇಳಲಾಗ್ತಿದೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…