ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದು, ಸರ್ಜಾ ಕುಟುಂಬ ಶೃತಿ ಹರಿಹರನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದೆ.
ನಟಿ ಶ್ರುತಿ ಹರಿಹರನ್ ಮಾಡಿರುವ ಮೀ ಟೂ ಆರೋಪ ದೊಡ್ಡ ಚರ್ಚೆ ಆಗುತ್ತದೆ. ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ನೀಡಿರುವ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಸರ್ಜಾ ಕುಟುಂಬದ ಸಹ ಈ ಘಟನೆ ಬಗ್ಗೆ ಮಾತನಾಡುತ್ತಿದೆ. ಈಗಾಗಲೇ ಅರ್ಜುನ್ ಸರ್ಜಾ ಅವರ ಮಾವ ನಟ ರಾಜೇಶ್ ಪ್ರತಿಕ್ರಿಯೆ ನೀಡಿದ್ದರು. ಇದೀಗ ನಟ ಧ್ರುವ ಸರ್ಜಾ ಸಹ ತಮ್ಮ ಮಾವನ ಮೇಲೆ ಬಂದಿರುವ ಆರೋಪದ ಬಗ್ಗೆ ಮಾತನಾಡಿದ್ದಾರೆ.
ಶ್ರುತಿ ಹರಿಹರನ್ ಗೆ ಓಪನ್ ಚಾಲೆಂಜ್ ಹಾಕಿರುವ ಧ್ರುವ ಸರ್ಜಾ, ”ಸಾಕ್ಷಿ ಇದೆ ಎಂದು ಹೇಳಿದ್ದಾರೆ, ಅವರ ಬಳಿ ಏನಾದರೂ ಸಾಕ್ಷಿ ಇದ್ದರೆ ತೋರಿಸಲಿ. ಪಬ್ಲಿಸಿಟಿ ತೆಗೆದುಕೊಂಡಿದ್ದು ಸಾಕು.” ಎಂದು ಹೇಳಿದ್ದಾರೆ.
”ಮೀಟೂ ಒಂದು ಒಳ್ಳೆಯ ವೇದಿಕೆ. ಅಲ್ಲಿ ಬಂದು ಎಲ್ಲರೂ ಹೇಳುವುದು ಒಳ್ಳೆಯದು. ಆದರೆ, ಅಲ್ಲಿ ಎಷ್ಟೊ ಪಾಸಿಟಿವ್ ಇದೆಯೋ ಅಷ್ಟೇ ನೆಗೆಟಿವ್ ಇದೆ. ನಾನು ಚಿಕ್ಕ ವಯಸ್ಸಿನಿಂದ ನಮ್ಮ ಅಂಕಲ್ ಅನ್ನು ನೋಡಿಕೊಂಡು ಬಂದಿದ್ದೇನೆ. ಅವರು ಏನು ಅಂತ ನನಗೆ ತುಂಬ ಚೆನ್ನಾಗಿ ಗೊತ್ತಿದೆ.” ಎಂದು ಹೇಳಿದರು..
‘ಪಬ್ಲಿಸಿಟಿ ತೆಗೆದುಕೊಂಡಿದ್ದು ಸಾಕು. ಮುಂದೆ ಬನ್ನಿ ಮಾತಾಡಿ. ಅವರ ವಯಸ್ಸಿನ ಮಗಳ ಅವರಿಗೆ ಇದ್ದಾರೆ. ಸುಮ್ಮನೆ ಮಾತನಾಡುವುದು ಸುಲಭ. ಯಾರೋ ಬಂದು ಏನೋ ಹೇಳಿದರೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ.”ಯಾವುದೋ ನಾಯಿ ನರಿ ಕ್ರಿಮಿ ಕೀಟಗಳು ಹೇಳಿದ್ದನ್ನು ನಾನು ಕೇಳುವುದಿಲ್ಲ. ಅವರಿಗೆ ಹೇಳಬೇಕು ಅಂತ ಅನಿಸಿದರೆ, ಅವತ್ತೇ ಹೇಳಬಹುದಿತ್ತು. ನಮ್ಮ ಮನೆ ದೇವರ ಬಗ್ಗೆ ನನಗೆ ಗೊತ್ತಿದೆ. ಸಾಕ್ಷಿ ಇದೇ ಎಂದರಲ್ಲ, ಇದ್ದರೆ ತೊರಿಸಲಿ.”. ಸಾಕ್ಷಿ ಇದ್ದರೆ ತೋರಿಸಲಿ ಎಂದು ಧೃವ ಸರ್ಜಾ ಖಡಕ್ ಸವಾಲು ಹಾಕಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…