ಉಡುಪಿ

ನಮ್ಮ ಮನೆ ದೇವರ ಬಗ್ಗೆ ನನಗೆ ಗೊತ್ತಿದೆ ; ಶೃತಿ ಹರಿಹರನ್ ಗೆ ಸವಾಲು ಹಾಕಿದ ಧೃವ ಸರ್ಜಾ

ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದು, ಸರ್ಜಾ ಕುಟುಂಬ ಶೃತಿ ಹರಿಹರನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದೆ.

ನಟಿ ಶ್ರುತಿ ಹರಿಹರನ್ ಮಾಡಿರುವ ಮೀ ಟೂ ಆರೋಪ ದೊಡ್ಡ ಚರ್ಚೆ ಆಗುತ್ತದೆ. ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ನೀಡಿರುವ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಸರ್ಜಾ ಕುಟುಂಬದ ಸಹ ಈ ಘಟನೆ ಬಗ್ಗೆ ಮಾತನಾಡುತ್ತಿದೆ. ಈಗಾಗಲೇ ಅರ್ಜುನ್ ಸರ್ಜಾ ಅವರ ಮಾವ ನಟ ರಾಜೇಶ್ ಪ್ರತಿಕ್ರಿಯೆ ನೀಡಿದ್ದರು. ಇದೀಗ ನಟ ಧ್ರುವ ಸರ್ಜಾ ಸಹ ತಮ್ಮ ಮಾವನ ಮೇಲೆ ಬಂದಿರುವ ಆರೋಪದ ಬಗ್ಗೆ ಮಾತನಾಡಿದ್ದಾರೆ.

ಶ್ರುತಿ ಹರಿಹರನ್ ಗೆ ಓಪನ್ ಚಾಲೆಂಜ್ ಹಾಕಿರುವ ಧ್ರುವ ಸರ್ಜಾ, ”ಸಾಕ್ಷಿ ಇದೆ ಎಂದು ಹೇಳಿದ್ದಾರೆ, ಅವರ ಬಳಿ ಏನಾದರೂ ಸಾಕ್ಷಿ ಇದ್ದರೆ ತೋರಿಸಲಿ. ಪಬ್ಲಿಸಿಟಿ ತೆಗೆದುಕೊಂಡಿದ್ದು ಸಾಕು.” ಎಂದು ಹೇಳಿದ್ದಾರೆ.

”ಮೀಟೂ ಒಂದು ಒಳ್ಳೆಯ ವೇದಿಕೆ. ಅಲ್ಲಿ ಬಂದು ಎಲ್ಲರೂ ಹೇಳುವುದು ಒಳ್ಳೆಯದು. ಆದರೆ, ಅಲ್ಲಿ ಎಷ್ಟೊ ಪಾಸಿಟಿವ್ ಇದೆಯೋ ಅಷ್ಟೇ ನೆಗೆಟಿವ್ ಇದೆ. ನಾನು ಚಿಕ್ಕ ವಯಸ್ಸಿನಿಂದ ನಮ್ಮ ಅಂಕಲ್ ಅನ್ನು ನೋಡಿಕೊಂಡು ಬಂದಿದ್ದೇನೆ. ಅವರು ಏನು ಅಂತ ನನಗೆ ತುಂಬ ಚೆನ್ನಾಗಿ ಗೊತ್ತಿದೆ.” ಎಂದು ಹೇಳಿದರು..

‘ಪಬ್ಲಿಸಿಟಿ ತೆಗೆದುಕೊಂಡಿದ್ದು ಸಾಕು. ಮುಂದೆ ಬನ್ನಿ ಮಾತಾಡಿ. ಅವರ ವಯಸ್ಸಿನ ಮಗಳ ಅವರಿಗೆ ಇದ್ದಾರೆ. ಸುಮ್ಮನೆ ಮಾತನಾಡುವುದು ಸುಲಭ. ಯಾರೋ ಬಂದು ಏನೋ ಹೇಳಿದರೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ.”ಯಾವುದೋ ನಾಯಿ ನರಿ ಕ್ರಿಮಿ ಕೀಟಗಳು ಹೇಳಿದ್ದನ್ನು ನಾನು ಕೇಳುವುದಿಲ್ಲ. ಅವರಿಗೆ ಹೇಳಬೇಕು ಅಂತ ಅನಿಸಿದರೆ, ಅವತ್ತೇ ಹೇಳಬಹುದಿತ್ತು. ನಮ್ಮ ಮನೆ ದೇವರ ಬಗ್ಗೆ ನನಗೆ ಗೊತ್ತಿದೆ. ಸಾಕ್ಷಿ ಇದೇ ಎಂದರಲ್ಲ, ಇದ್ದರೆ ತೊರಿಸಲಿ.”. ಸಾಕ್ಷಿ ಇದ್ದರೆ ತೋರಿಸಲಿ ಎಂದು ಧೃವ ಸರ್ಜಾ ಖಡಕ್ ಸವಾಲು ಹಾಕಿದ್ದಾರೆ.

Vishwa News 24

Recent Posts

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

9 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

18 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

26 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

47 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago