ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದು, ಸರ್ಜಾ ಕುಟುಂಬ ಶೃತಿ ಹರಿಹರನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದೆ.
ನಟಿ ಶ್ರುತಿ ಹರಿಹರನ್ ಮಾಡಿರುವ ಮೀ ಟೂ ಆರೋಪ ದೊಡ್ಡ ಚರ್ಚೆ ಆಗುತ್ತದೆ. ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ನೀಡಿರುವ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಸರ್ಜಾ ಕುಟುಂಬದ ಸಹ ಈ ಘಟನೆ ಬಗ್ಗೆ ಮಾತನಾಡುತ್ತಿದೆ. ಈಗಾಗಲೇ ಅರ್ಜುನ್ ಸರ್ಜಾ ಅವರ ಮಾವ ನಟ ರಾಜೇಶ್ ಪ್ರತಿಕ್ರಿಯೆ ನೀಡಿದ್ದರು. ಇದೀಗ ನಟ ಧ್ರುವ ಸರ್ಜಾ ಸಹ ತಮ್ಮ ಮಾವನ ಮೇಲೆ ಬಂದಿರುವ ಆರೋಪದ ಬಗ್ಗೆ ಮಾತನಾಡಿದ್ದಾರೆ.
ಶ್ರುತಿ ಹರಿಹರನ್ ಗೆ ಓಪನ್ ಚಾಲೆಂಜ್ ಹಾಕಿರುವ ಧ್ರುವ ಸರ್ಜಾ, ”ಸಾಕ್ಷಿ ಇದೆ ಎಂದು ಹೇಳಿದ್ದಾರೆ, ಅವರ ಬಳಿ ಏನಾದರೂ ಸಾಕ್ಷಿ ಇದ್ದರೆ ತೋರಿಸಲಿ. ಪಬ್ಲಿಸಿಟಿ ತೆಗೆದುಕೊಂಡಿದ್ದು ಸಾಕು.” ಎಂದು ಹೇಳಿದ್ದಾರೆ.
”ಮೀಟೂ ಒಂದು ಒಳ್ಳೆಯ ವೇದಿಕೆ. ಅಲ್ಲಿ ಬಂದು ಎಲ್ಲರೂ ಹೇಳುವುದು ಒಳ್ಳೆಯದು. ಆದರೆ, ಅಲ್ಲಿ ಎಷ್ಟೊ ಪಾಸಿಟಿವ್ ಇದೆಯೋ ಅಷ್ಟೇ ನೆಗೆಟಿವ್ ಇದೆ. ನಾನು ಚಿಕ್ಕ ವಯಸ್ಸಿನಿಂದ ನಮ್ಮ ಅಂಕಲ್ ಅನ್ನು ನೋಡಿಕೊಂಡು ಬಂದಿದ್ದೇನೆ. ಅವರು ಏನು ಅಂತ ನನಗೆ ತುಂಬ ಚೆನ್ನಾಗಿ ಗೊತ್ತಿದೆ.” ಎಂದು ಹೇಳಿದರು..
‘ಪಬ್ಲಿಸಿಟಿ ತೆಗೆದುಕೊಂಡಿದ್ದು ಸಾಕು. ಮುಂದೆ ಬನ್ನಿ ಮಾತಾಡಿ. ಅವರ ವಯಸ್ಸಿನ ಮಗಳ ಅವರಿಗೆ ಇದ್ದಾರೆ. ಸುಮ್ಮನೆ ಮಾತನಾಡುವುದು ಸುಲಭ. ಯಾರೋ ಬಂದು ಏನೋ ಹೇಳಿದರೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ.”ಯಾವುದೋ ನಾಯಿ ನರಿ ಕ್ರಿಮಿ ಕೀಟಗಳು ಹೇಳಿದ್ದನ್ನು ನಾನು ಕೇಳುವುದಿಲ್ಲ. ಅವರಿಗೆ ಹೇಳಬೇಕು ಅಂತ ಅನಿಸಿದರೆ, ಅವತ್ತೇ ಹೇಳಬಹುದಿತ್ತು. ನಮ್ಮ ಮನೆ ದೇವರ ಬಗ್ಗೆ ನನಗೆ ಗೊತ್ತಿದೆ. ಸಾಕ್ಷಿ ಇದೇ ಎಂದರಲ್ಲ, ಇದ್ದರೆ ತೊರಿಸಲಿ.”. ಸಾಕ್ಷಿ ಇದ್ದರೆ ತೋರಿಸಲಿ ಎಂದು ಧೃವ ಸರ್ಜಾ ಖಡಕ್ ಸವಾಲು ಹಾಕಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…