Featured

ನಮ್ಮ ಮುಂದಿನ ಗುರಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ : ನಳಿನ್ ಕುಮಾರ್ ಕಟೀಲ್ -Vishwanews24

ಮೈಸೂರು, : “370 ಕಾಯ್ದೆ ರದ್ದತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಹಾಕಿದ್ದೇವೆ. ಬಿಜೆಪಿಯ ನಮ್ಮ ಮುಂದಿನ ಗುರಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ” ಎಂದಿದ್ದಾರೆ ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸುವ ಮೂಲಕ ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ. ಬಿಜೆಪಿ ವಿಚಾರಧಾರೆಗಳ ಬಗ್ಗೆ ಜನರಲ್ಲಿ ನಂಬಿಕೆ ಹಾಗೂ ವಿಶ್ವಾಸ ಬಂದಿದೆ.

ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಹಾಗೂ ಯಡಿಯೂರಪ್ಪ ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ನನ್ನ ಗುರಿ. ಈ ನಿಟ್ಟಿನಲ್ಲಿ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ” ಎಂದರು. ”

ರಾಜ್ಯ ಮತ್ತು ಕೇಂದ್ರದಲ್ಲಿ ಪಕ್ಷ ಅಧಿಕಾರದಲ್ಲಿರುವ ವಿಶಿಷ್ಟ ಸಂದರ್ಭದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿದ್ದೇನೆ. ಈ ಸಂದರ್ಭವನ್ನು ಉಪಯೋಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಸವಾಲು ನನ್ನ ಮೇಲಿದೆ. ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಪಕ್ಷ ಹಾಗೂ ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಬೇಕಾಗಿದೆ.

ಪಕ್ಷದ ಕಾರ್ಯಕರ್ತರ ಶ್ರಮದಿಂದ ಚುನಾವಣೆ ಗೆಲ್ಲಲು ಗಮನ ಹರಿಸಲಾಗುವುದು. ಮೈಸೂರಲ್ಲಿ ಕ್ರಿಯಾಶೀಲರಾದ ಪ್ರತಾಪಸಿಂಹ ಇದ್ದಾರೆ. ಯಾವುದೇ ಸಂದರ್ಭದಲ್ಲಿ ಪ್ರಧಾನಿ ಬಳಿ ಹೋಗಿ ಮಾತನಾಡುವ ಸಾಮರ್ಥ್ಯ ಅವರಲ್ಲಿದೆ” ಎಂದು ಹೊಗಳಿದರು.

 

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

7 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago