ಬೆಂಗಳೂರು: ಸಚಿವ ಎಚ್.ಡಿ.ರೇವಣ್ಣ ಇಂದು ಸುದ್ದಿಗೋಷ್ಠಿ ನಡೆಸಿ, ತಮ್ಮ ಇಲಾಖೆಯಿಂದ ಆದ ಕೆಲಸಗಳನ್ನು ತಿಳಿಸಿದ್ದಾರೆ. ಅಲ್ಲದೆ, ಅತೃಪ್ತ ಶಾಸಕರನ್ನು ವಾಪಸ್ ಬರುವಂತೆ ಮನವಿ ಮಾಡಿದ್ದಾರೆ.
ಇವತ್ತಿನ ಸ್ಥಿತಿಗೆ ನಾನೇ ಕಾರಣ ಎನ್ನುತ್ತಾರೆ. ಆದರೆ, ಖಂಡಿತ ನನ್ನ ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗಳ ಕಡೆ ಗಮನ ಹರಿಸಿಲ್ಲ. ಯಾವುದೇ ಅಧಿಕಾರಿಗಳ ವರ್ಗಾವಣೆಯಲ್ಲಿ ತಲೆ ಹಾಕಿಲ್ಲ. ಪ್ರತಿದಿನದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ನನ್ನ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಎಷ್ಟು ಸಾಧ್ಯವೋ ಅಷ್ಟು ಕೆಲಸ ಮಾಡಿದ್ದೇನೆ ಎಂದು ಸಮರ್ಥಿಸಿಕೊಂಡರು.
ಇದು ದೇವರು ಕೊಟ್ಟ ಸರ್ಕಾರ. ಈ ಸರ್ಕಾರ ಉಳಿದರೆ ಬಡವರಿಗೆ ಅನುಕೂಲ ಆಗುತ್ತದೆ. ಇಂದಿನ ಸ್ಥಿತಿಗೆ ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಿದ ರೇವಣ್ಣ, ನನ್ನಿಂದ ತಪ್ಪು ಆಗಿದ್ರೆ ಕ್ಷಮಿಸಿ ವಾಪಸ್ ಬನ್ನಿ ಎಂದು ಮುಂಬೈನಲ್ಲಿರುವ ಅತೃಪ್ತ ಶಾಸಕರಿಗೆ ಮನವಿ ಮಾಡಿದರು.
ನನ್ನ ತಂದೆ-ತಾಯಿ ಆಶೀರ್ವಾದ, ಕುಲದೇವರು ರಂಗನಾಥ ಸ್ವಾಮಿಯ ಆಶೀರ್ವಾದ ಇರುವ ವರೆಗೂ ಯಾರೂ ನನಗೇನೂ ಮಾಡಲಾರರು’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತ ರೇವಣ್ಣ ಹೇಳಿದರು.
ಎಚ್.ಡಿ.ರೇವಣ್ಣ ಮತ್ತು ಕುಮಾರಸ್ವಾಮಿ ಹೊಡೆದಾಡುತ್ತಾರೆ ಎಂಬುದೆಲ್ಲ ಕನಸು. ನನ್ನ ಮೇಲೆ ತಂದೆ-ತಾಯಿ ಆಶೀರ್ವಾದ ಇದೆ. ನಾನು ಈ ಮಟ್ಟಕ್ಕೆ ಬೆಳೆದದ್ದು ಅವರ ಆಶೀರ್ವಾದದಿಂದಲೇ. ನಾನು ಯಾವ ಶಾಸಕರ ಮನಸನ್ನೂ ನೋಯಿಸಿಲ್ಲ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…