ನವದೆಹಲಿ: ನಮ್ಮ ವಿಜ್ಞಾನಿಗಳ ಸಾಧನೆ ಪ್ರತಿಯೊಬ್ಬ ಭಾರತಿಯರಿಗೂ ಸ್ಫೂರ್ತಿ ,ಇಸ್ರೋ ವಿಜ್ಞಾನಿಗಳ ಕೆಲಸ ವ್ಯರ್ಥವಾಗಿಲ್ಲ ಎಂದು ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಕಳೆದುಕೊಂಡ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಭಾರತ ಹೆಮ್ಮೆಯ ಸಂಸ್ಥೆ ಇಸ್ರೋ ಕೈಗೊಂಡಿದ್ದ ಚಂದ್ರಯಾನ -2 ಯೋಜನೆ ಬಹುತೇಕ ಯಶಸ್ವಿಯಾಗಿ ನಡೆದಿದ್ದು, ಆದರೆ ಅಂತಿಮ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಸಂಪರ್ಕ ಕಡಿತಗೊಂಡಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ನಮ್ಮ ವಿಜ್ಞಾನಿಗಳ ಸಾಧನೆ ಪ್ರತಿಯೊಬ್ಬ ಭಾರತಿಯರಿಗೂ ಸ್ಫೂರ್ತಿ ಎಂದು ಹೇಳಿದ್ದಾರೆ.
ಚಂದ್ರಯಾನ-2 ಮೂನ್ ಮಿಷನ್ನಲ್ಲಿ ಇಸ್ರೋ ತಂಡವು ಮಾಡಿದ ಅದ್ಭುತ ಕಾರ್ಯಕ್ಕಾಗಿ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ನಿಮ್ಮ ಈ ಸಾಧನೆ ಭಾರತೀಯ ವೈಜ್ಞಾನಿಕ ಹಾದಿಗೆ ಮತ್ತು ಮುಂದಿನ ಭಾರತ ಕಾರ್ಯಚರಣೆಗೆ ಅಡಿಪಾಯವನ್ನು ಹಾಕಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಈ ವಿಚಾರದ ಬಗ್ಗೆ ಕಾಂಗ್ರೆಸ್ ಪಕ್ಷವು ಕೂಡ ಟ್ವೀಟ್ ಮಾಡಿದ್ದು, ಈ ಉದ್ವಿಗ್ನ ಸಮಯದಲ್ಲಿ ರಾಷ್ಟ್ರವು ಇಸ್ರೋದ ಸಂಪೂರ್ಣ ತಂಡ ಜೊತೆ ನಿಂತಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆಯು ನಮ್ಮ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಜೈ ಹಿಂದ್ ಎಂದು ಟ್ವೀಟ್ ಮಾಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…