ಕಾಂತಾರ ಚಾಪ್ಟರ್ 1 ಸಕ್ಸಸ್ ಬೆನ್ನಲ್ಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಡಿಕೆಶಿ, ರಿಷಬ್ ಜೊತೆಗಿನ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಇಂದು (ನ.19) ನನ್ನ ಗೃಹಕಚೇರಿಯಲ್ಲಿ ಖ್ಯಾತ ನಟ ರಿಷಬ್ ಶೆಟ್ಟಿಯವರು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಈ ವೇಳೆ ಕಾಂತಾರ: ಒಂದು ದಂತಕಥೆ – ಅಧ್ಯಾಯ 1ರ ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ ಶ್ಲಾಘನೀಯ. ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಅವರು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.
ಡಿಕೆಶಿ ಅವರನ್ನು ರಿಷಬ್ ಶೆಟ್ಟಿ ಭೇಟಿಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭೇಟಿಯಾಗಿರುವುದಕ್ಕೆ ನಿಖರ ಕಾರಣದ ಬಗ್ಗೆ ರಿಷಬ್ ಎಲ್ಲಿಯೂ ಹೇಳಿಕೊಂಡಿಲ್ಲ.
ಸದ್ಯ ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಕಂಡಿದ್ದು, ಸುಮಾರು 850 ಕೋಟಿ ರೂ.ಗೂ ಅಧಿಕ ಹಣವನ್ನು ಗಳಿಸಿದೆ. ಕೆಜಿಎಫ್ 2 ನಂತರ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡ ಸಿನಿಮಾ ಎಂಬ ಖ್ಯಾತಿಯನ್ನು ಗಿಟ್ಟಿಸಿಕೊಂಡಿದೆ. ಅಲ್ಲದೆ, 2025ರಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆ ಈ ಚಿತ್ರಕ್ಕಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…