Featured

ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಜನ ವಿರೋಧಿ ಕಾಯ್ದೆ, ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುತ್ತೇವೆ : ಡಿಕೆ ಶಿವಕುಮಾರ್ -Vishwanews24

ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಜನ ವಿರೋಧಿ ಕಾಯ್ದೆ, ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುತ್ತೇವೆ : ಡಿಕೆ ಶಿವಕುಮಾರ್ -Vishwanews24

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯಿಂದಾಗಿ ಚರ್ಮ ಉದ್ಯಮಕ್ಕೆ ಈ ಕಾಯ್ದೆಯಿಂದ ಹೊಡೆತ ಬೀಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಚರ್ಮ ಉದ್ಯಮ ಈ ಕಾಯ್ದೆಯಿಂದ ಮುಚ್ಚಿ ಹೋಗುವ ಆತಂಕ ಇದೆ. ಈ ಬಗ್ಗೆ ಅಧ್ಯಯನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಜನ ವಿರೋಧಿ ಕಾಯ್ದೆ, ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ನಾಡಿನ ಜನತೆಗೆ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ಪರಿಣಾಮಗಳ ಬಗ್ಗೆ ಗ್ರಾಮ ಪಂಚಾಯತಿ ಚುನಾವಣೆ ಮುಗಿದ ಬಳಿಕ ಜಾಗೃತಿ ಅಭಿಯಾನ ರಾಜ್ಯಾದ್ಯಂತ ಮಾಡಲಾಗುವುದು.

ರಾಜ್ಯದ ಎಲ್ಲ ವರ್ಗದ ಜನರಿಗೆ ಜಾಗೃತಿ ಮೂಡಿಸಲು ಪ್ರತಿ ತಾಲೂಕಿನಲ್ಲಿ ಅಭಿಯಾನ ಕೈಗೊಳ್ಳಲಾಗುವುದು. ಜಾನುವಾರು ಖರೀದಿ ದರ ಸರ್ಕಾರ ನಿಗದಿ ಮಾಡಿದೆ. ಅದನ್ನು ಕೊಟ್ಟು ಸರ್ಕಾರವೇ ಜಾನುವಾರು ಖರೀದಿ ಮಾಡಲಿ. ಸಚಿವರು, ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಜಾನುವಾರು ಸಾಕಲಿ ಎಂದು ಟಾಂಗ್‌ ಕೊಟ್ಟರು.

ಮುಖ್ಯಮಂತ್ರಿ ಬಿಎಸ್‌ವೈ ಸರಕಾರದ ಗೋಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲೂ ಈ ಕಾಯ್ದೆ ವಿರುದ್ಧ ತೀವ್ರ ಹೋರಾಟ ನಡೆಸಿದೆ. ವಿಧಾನಸಭೆಯ ಚರ್ಚೆಯ ಬಳಿಕ ಡಿಕೆ ಶಿವಕುಮಾರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

32 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

44 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago