ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯಿಂದಾಗಿ ಚರ್ಮ ಉದ್ಯಮಕ್ಕೆ ಈ ಕಾಯ್ದೆಯಿಂದ ಹೊಡೆತ ಬೀಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಚರ್ಮ ಉದ್ಯಮ ಈ ಕಾಯ್ದೆಯಿಂದ ಮುಚ್ಚಿ ಹೋಗುವ ಆತಂಕ ಇದೆ. ಈ ಬಗ್ಗೆ ಅಧ್ಯಯನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಜನ ವಿರೋಧಿ ಕಾಯ್ದೆ, ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ನಾಡಿನ ಜನತೆಗೆ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ಪರಿಣಾಮಗಳ ಬಗ್ಗೆ ಗ್ರಾಮ ಪಂಚಾಯತಿ ಚುನಾವಣೆ ಮುಗಿದ ಬಳಿಕ ಜಾಗೃತಿ ಅಭಿಯಾನ ರಾಜ್ಯಾದ್ಯಂತ ಮಾಡಲಾಗುವುದು.
ರಾಜ್ಯದ ಎಲ್ಲ ವರ್ಗದ ಜನರಿಗೆ ಜಾಗೃತಿ ಮೂಡಿಸಲು ಪ್ರತಿ ತಾಲೂಕಿನಲ್ಲಿ ಅಭಿಯಾನ ಕೈಗೊಳ್ಳಲಾಗುವುದು. ಜಾನುವಾರು ಖರೀದಿ ದರ ಸರ್ಕಾರ ನಿಗದಿ ಮಾಡಿದೆ. ಅದನ್ನು ಕೊಟ್ಟು ಸರ್ಕಾರವೇ ಜಾನುವಾರು ಖರೀದಿ ಮಾಡಲಿ. ಸಚಿವರು, ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಜಾನುವಾರು ಸಾಕಲಿ ಎಂದು ಟಾಂಗ್ ಕೊಟ್ಟರು.
ಮುಖ್ಯಮಂತ್ರಿ ಬಿಎಸ್ವೈ ಸರಕಾರದ ಗೋಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲೂ ಈ ಕಾಯ್ದೆ ವಿರುದ್ಧ ತೀವ್ರ ಹೋರಾಟ ನಡೆಸಿದೆ. ವಿಧಾನಸಭೆಯ ಚರ್ಚೆಯ ಬಳಿಕ ಡಿಕೆ ಶಿವಕುಮಾರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…