Featured

ನಮ್ಮ ಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ : CM ಸಿದ್ದರಾಮಯ್ಯ – vishwanews24

ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು.

ಎಲ್ಲರಲ್ಲೂ ಮನುಷ್ಯತ್ವ, ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಬಕ್ರೀದ್ ಶುಭಾಶಯ ತಿಳಿಸಿದ ಮುಖ್ಯಮಂತ್ರಿ

ಬೆಂಗಳೂರು: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು,

ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು ಎಂದರು.

ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. , ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲಾ ಧರ್ಮಗಳೂ ಎಳಿಗೆಯಾಗುತ್ತದೆ ಎಂದರು.

ನಮ್ಮ ಸರ್ಕಾರ ಸರ್ವ ಧರ್ಮ ಸಮನ್ವಯ ದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ:

ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರನ್ನು ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

17 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

17 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

17 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

18 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

18 hours ago