ಬೆಂಗಳೂರು: ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಯನ್ನು ಸ್ವಾಗತ ಮಾಡುತ್ತೇನೆ. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ಸ್ತಬ್ದವಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿದೆ. ನಗರ ನಕ್ಸಲ್ಗಳು ಸಹ ಇದ್ದಾರೆ. ಕಾಡಿನಲ್ಲಿ ಕೂತು ಬಂದೂಕು ಹಿಡಿದು ಕಾರ್ಯಚರಣೆ ಮಾಡುವವರು ಇದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ನಕ್ಸಲ್ ಚಟುವಟಿಕೆಯನ್ನು ಮಟ್ಟ ಹಾಕಿದ್ದೆವು. ಇವರೆಲ್ಲ ಹೊರ ರಾಜ್ಯಗಳಲ್ಲಿ ತಲೆಮರಿಸಿಕೊಂಡಿದ್ದರು. ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ತಮ್ಮ ಚಟುವಟಿಕೆಗಳನ್ನು ಮಾಡಲು ಬಂದಿದ್ದಾರೆ. ನಗರ ನಕ್ಸಲ್ಗಳ ಚಟುವಟಿಕೆಗಳನ್ನ ಸರ್ಕಾರ ಗಮನಿಸಬೇಕು. ವಿಶ್ವವಿದ್ಯಾಲಯ, ಸಾಹಿತಿಗಳು ಎಂದು ಹೇಳಿಕೊಳ್ಳುವವರು, ಬುದ್ಧಿ ಜೀವಿಗಳು ಈ ನಕ್ಸಲ್ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಾರೆ ಎಂದರು.
ನಕ್ಸಲರ ಮಟ್ಟ ಹಾಕಬೇಕು. ಕ್ಷಮೆ ಕೋರಿ ಬರುವ ವಿಚಾರದಲ್ಲಿ ಸರ್ಕಾರ ಚರ್ಚೆ ಮಾಡಬೇಕು. ನಕ್ಸಲ್ ಚಟುವಟಿಕೆಯನ್ನ ಮತ್ತೆ ನಗರಕ್ಕೆ ಬಂದು ಮುಂದುವರಿಸುವವರಿದ್ದಾರೆ. ಅದರ ಬಗ್ಗೆ ನಿಗಾವಹಿಸಬೇಕು. ನಕ್ಸಲ್ ನಿಗ್ರಹ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…