Featured

ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ : ಸಿದ್ದರಾಮಯ್ಯ -Vishwanews24

ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: “ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ. ಈ ರೀತಿ ಸುಳ್ಳು ಹೇಳಿ ಜನರೆದುರು ಬೆತ್ತಲೆ ಆಗೋದನ್ನು ತಪ್ಪಿಸಲು ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಉಸ್ತುವಾರಿಗಳಿಗೆ ಸಾರ್ವಜನಿಕ ಹಣಕಾಸು ನಿರ್ವಹಣೆಯ ಬಗ್ಗೆ ತರಬೇತಿಕೊಡುವುದು ಒಳ್ಳೆಯದು” ಎಂದು ಲೇವಡಿ ಮಾಡಿದ್ದಾರೆ.

5 ಕೋಟಿ ಕೊಟ್ಟರೆ ಪ್ರಧಾನಿ ಮೋದಿ ಹತ್ಯೆ ಮಾಡುತ್ತೇನೆ ಎಂದಿದ್ದ ವ್ಯಕ್ತಿ ಇದೀಗ ಪೊಲೀಸರ ಅತಿಥಿ.. -Vishwanews24

“ನಮ್ಮ ಸರ್ಕಾರದ ಕೊನೆ ವರ್ಷ(2017-18) ಪಡೆದಿದ್ದ ಸಾಲ ಕೇವಲ ರೂ.35,000 ಕೋಟಿ. 2020-21ರ ಪ್ರಸಕ್ತ ಹಣಕಾಸು ವರ್ಷದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಸಾಲ ರೂ.90,000 ಕೋಟಿ, ಅಂದರೆ 157% ಹೆಚ್ಚಳ. ಇದಕ್ಕೆ ಮುಖ್ಯ ಕಾರಣ ತೆರಿಗೆ ಪಾಲು ಮತ್ತು ಅನುದಾನದ ಮೊತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಅನ್ಯಾಯ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ : ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ -Vishwanews24

“ಆರ್ಥಿಕ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆಗೆ ಬದ್ದವಾಗಿಯೇ ನಾನು ಆರು ಬಜೆಟ್ ಮಂಡಿಸಿದ್ದೆ. ಈ ಎಲ್ಲ ಬಜೆಟ್ ಗಳಲ್ಲಿ ಹಣಕಾಸು ಕೊರತೆ ಜಿಎಸ್ ಡಿಪಿಯ ಶೇಕಡಾ ಮೂರರ ಮಿತಿಯಲ್ಲಿತ್ತು. ಒಟ್ಟುಸಾಲ ಎಫ್ ಆರ್ ಬಿ ಎಂ ಕಾಯ್ದೆಗೆ ಅನುಗುಣವಾಗಿ ಜಿಎಸ್ ಡಿಪಿಯ ಶೇಕಡಾ 25ರ ಮಿತಿಯಲ್ಲಿತ್ತು” ಎಂದಿದ್ದಾರೆ.

ಮಂಗಳೂರು : ಕಾರು ಹಾಗೂ ಮೀನಿನ ಲಾರಿ ನಡುವೆ ಅಪಘಾತ : ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ರಿಗೆ ಗಾಯ -Vishwanews24

“ಬಿಜೆಪಿ ಆಡಳಿತದಲ್ಲಿ ಒಟ್ಟು ಸಾಲ ಜಿಎಸ್ ಡಿಪಿಯ ಶೇಕಡಾ 33ರಷ್ಟಾಗಿದೆ. ಇದು ಎಫ್‌‌ಆರ್‌‌ಬಿಎಂ ಕಾಯ್ದೆಯ ಉಲ್ಲಂಘನೆ. ಇದರ ಜೊತೆಗೆ ಹಣಕಾಸು ಕೊರತೆ ಶೇಕಡಾ ಮೂರರಿಂದ ಐದಕ್ಕೇರಿದೆ. ಇದು ಆತಂಕಕಾರಿ ಬೆಳವಣಿಗೆ. ಮೊದಲು‌ ಈ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಿ,‌ ಆ‌ ಮೇಲೆ ನಮ್ಮ ಸರ್ಕಾರದ ತಪ್ಪು ಹುಡುಕಲು ಹೊರಡಿ” ಎಂದು ಹೇಳಿದ್ದಾರೆ

ಉಡುಪಿ :ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲು ಟೆಂಡರ್ ಪ್ರಕ್ರಿಯೆ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

13 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

14 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

14 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

14 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

14 hours ago