ಬೆಂಗಳೂರು, : ಜನರ ಮತ್ತು ದೇವರ ಆಶೀರ್ವಾದದಿಂದ ಸರ್ಕಾರ ಸುಭದ್ರವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಹಣ ಕೈಯಲ್ಲಿ ಹಿಡಿದುಕೊಂಡು ಈ ಸರ್ಕಾರವನ್ನು ಉರುಳಿಸಲು ಕೂತಿದ್ದಾರೆ. ಆದರೆ ಜನರ ಮತ್ತು ದೇವರ ಆಶೀರ್ವಾದದಿಂದ ಸರ್ಕಾರ ಸುಭದ್ರವಾಗಿದೆ. ನಾವು ಐದು ವರ್ಷ ಪೂರೈಸುತ್ತೇವೆ ಎಂದು ಹೇಳಿದರು.
ಬಿಜೆಪಿಯ ಆಪರೇಷನ್ ಕಮಲ ಇನ್ನೂ ನಿಂತಿಲ್ಲ. ಈ ಬಗ್ಗೆ ನನಗೆ ಅನುಮಾನ ಮತ್ತೆ ಶುರುವಾಗಿದೆ. ಜೆಡಿಎಸ್ನ ಶಾಸಕರಿಗೆ ಬಿಜೆಪಿ ಮುಖಂಡರು ಕರೆ ಮಾಡಿ, ಈಗಾಗಲೇ ಕಾಂಗ್ರೆಸ್-ಜೆಡಿಎಸ್ನ ಹತ್ತು ಶಾಸಕರು ನಮ್ಮ ಕಡೆ ಬಂದಿದ್ದಾರೆ, ನೀವು ಬರುವುದಾದರೆ 10 ಕೋಟಿ ಹಣವನ್ನು ನೀವು ಕೇಳಿದ ಕಡೆಗೆ ತಂದು ಕೊಡುತ್ತೇವೆ ಅಂತಾ ಬಿಜೆಪಿಯವರು ಹೇಳಿದ್ದಾರೆ ಎಂದು ಆರೋಪಿಸಿದರು.
ಆಪರೇಷನ್ ಕಮಲ ತೆರೆ ಮರೆಯಲ್ಲಿ ನಡೆಯುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿಯು ಜೆಡಿಎಸ್ ಶಾಸಕರಿಗೆ ಕರೆ ಮಾಡಿ ಆಮೀಷ ಒಡ್ಡಿದ್ದಾರೆ. ಆದರೆ ನಮ್ಮ ಸರ್ಕಾರವನ್ನು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…