Featured

ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು ಸಾಯಿಸುತ್ತಿತ್ತು : ಸರ್ಕಾರದ ವಿರುದ್ಧ ಆರ್. ಅಶೋಕ್ ಗರಂ – Vishwanews24

ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು ಸಾಯಿಸುತ್ತಿತ್ತು : ಸರ್ಕಾರದ ವಿರುದ್ಧ ಆರ್. ಅಶೋಕ್ ಗರಂ

ಬೆಂಗಳೂರು: ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು ಸಾಯಿಸುತ್ತಿತ್ತು ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಎಮರ್ಜೆನ್ಸಿ ತಂದಿದ್ದಾರೆ. ವಿಪಕ್ಷಗಳು ದೇಶದ್ರೋಗಿಗಳ ಬಂಧನ ಮಾಡಿ ಅಂತ ಧರಣಿ ಮಾಡುತ್ತಿವೆ. ಆದರೆ ಸರ್ಕಾರ ಇದುವರೆಗೂ ಯಾರನ್ನ ಬಂಧನ ಮಾಡಿಲ್ಲ. ನಾವು ಸದನದಲ್ಲಿ ಧರಣಿ ಮಾಡಿದರೂ ಸೆನ್ಸಾರ್ ಹಾಕಿದ್ರು ಎಂದು ವಾಗ್ದಾಳಿ ನಡೆಸಿದರು.

ನಮ್ಮ ಹೋರಾಟ ದೇಶದ ಬದುಕಿಗಾಗಿ. ಪಾಕ್ ಭಯೋತ್ಪಾದಕರ ಗುಂಡಿಗೆ ನಮ್ಮ ಸೈನಿಕರು ಬಲಿಯಾಗ್ತಿದ್ದಾರೆ. ನಮ್ಮ ಸರ್ಕಾರ ಇದ್ದಿದ್ರೆ ಪಾಕ್ ಪರ ಘೋಷಣೆ ಕೂಗಿದವರನ್ನ ಅಲ್ಲೇ ಗುಂಡಿಟ್ಟು ಸಾಯಿಸ್ತಿತ್ತು. ಇವರು ಬಂಧನ ಕೂಡಾ ಮಾಡದೇ ರಕ್ಷಣೆ ಮಾಡ್ತಿದ್ದಾರೆ ಎಂದು ಅಶೋಕ್  ಗರಂ ಆದರು.

ನಮ್ಮ ದೇಶದ ಯೋಧರು ಪಾಕಿಸ್ತಾನದ ಭಯೋತ್ಪಾದಕರ ಗುಂಡಿಗೆ ಎದೆಯೊಡ್ಡಿ ನಿಂತಿದ್ರೆ, ಇಲ್ಲಿ ವಿಧಾನಸೌಧದೊಳಗೆ ಪಾಕಿಸ್ತಾನಕ್ಕೆ ಜೈಕಾರ ಹಾಕುವವರ ಪರ ಕಾಂಗ್ರೆಸ್ ನಿಲ್ಲುತ್ತೆ. ನಮ್ಮ ಸರ್ಕಾರ ಇದಿದ್ರೇ ದೇಶ ದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುತಿತ್ತು ಎಂದರು.

ಕಾಂಗ್ರೆಸ್‍ನವರು ಈ ಕೇಸ್ ಮುಚ್ಚಿ ಹಾಕುವ ಕ್ಯಾಸೆಟ್ ರೆಡಿ ಮಾಡ್ತಿದ್ದಾರೆ. ಪ್ರಿಯಾಂಕಾ ಖರ್ಗೆ ಈಗಾಗಲೇ ಹೇಳಿದ್ದಾರೆ. ದೇಶದ್ರೋಹಿಗಳನ್ನ ಸೇಫ್ ಮಾಡೋ ಕೆಲಸ ಮಾಡುತ್ತಿದ್ದಾರೆ. ನೋಡ್ತಿರಿ ಎಫ್ ಎಸ್ ಎಲ್ ವರದಿ ಹೇಗೆ ಬರುತ್ತೆ ಅಂತಾ. ಎಫ್‍ಎಸ್‍ಎಲ್ ಮೂಲಕ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ಮಾಡ್ತಿದ್ದಾರೆ. ನಾಸೀರ್ ಹುಸೇನ್ ರನ್ನ ಬಂಧಿಸಿ ವಿಚಾರಣೆ ಮಾಡಬೇಕಿತ್ತು. ಅಂದು ಪ್ರತಾಪ್ ಸಿಂಹರನ್ನ ಕಟಕಟೆಯಲ್ಲಿ ನಿಲ್ಸಿದ್ರು, ಅವರೇನೂ ಇವರ ಹಾಗೆ ದೇಶದ್ರೋಹದ ಕೆಲಸ ಮಾಡಿರಲಿಲ್ಲ ಎಂದು ಸಿಡಿಮಿಡಿಗೊಂಡರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

11 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

12 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

12 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago