ಉಡುಪಿ : “ನಮ್ಮ ಸರ್ಕಾರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ” ಎಂದು ಇಂಧನ ಇಲಾಖೆ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕೃಷಿ ಕಾಯ್ದೆ ಹಿಂಪಡೆತ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈಗಾಗಲೇ ಹತ್ತಾರು ರೈತ ಪ್ರತಿಭಟನೆಗಳು ನಡೆದಿವೆ. ವಿರೋಧ ಪಕ್ಷದವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಇತರರು ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ” ಎಂದಿದ್ದಾರೆ.
“ಮೂರು ಬಿಲ್ಗಳ ರೈತಪರವಾಗಿ ಇರುವ ಬಿಲ್ಗಳಾಗಿವೆ. ಕೇಂದ್ರ ಸರ್ಕಾರ ರೈತರ ಪರವಾಗಿ ಹತ್ತಾರು ಯೋಜನೆಗಳನ್ನು ಕೊಟ್ಟಿದೆ. ನಾವು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಎಲ್ಲೋ ಎಡವಿದ್ದೇವೆ. ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತೆಗೆದುಕೊಂಡು ಹೋಗುವುದರಲ್ಲಿ ಕೊರತೆ ಆಗಿದೆ. ರೈತರ ವಿಶ್ವಾಸಗಳಿಸುವುದರಲ್ಲಿ ಕೊರತೆ ಆಗಿದೆ. ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.
“ಕಾಂಗ್ರೆಸ್ ಹಾಗೂ ಇತರರು ರೈತರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ದಲ್ಲಾಳಿಗಳ ಪರ ಯಾರು ಇದ್ದಾರೆ ಎಂದು ಕೂಡಾ ಹತ್ತಾರು ಹೋರಾಟಗಳಲ್ಲಿ ತಿಳಿದುಬಂದಿದೆ” ಎಂದಿದ್ದಾರೆ.
“ಮುಂದಿನ ದಿನಗಳಲ್ಲಿ ನಾವು ಮತ್ತಷ್ಟು ರೈತರ ಹತ್ತಿರ ಹೋಗುವ ಯತ್ನವನ್ನು ಮಾಡುತ್ತೇವೆ. ಮುಂದಿನ ದಿನಗಳಲ್ಲಿ ರೈತರ ಮನವೊಲಿಸುವ ಕೆಲಸವನ್ನು ಮಾಡುತ್ತೇವೆ. ಬಿಲ್ನಿಂದ ರೈತರಿಗೆ ತೊಂದರೆ ಆಗುತ್ತದೋ ಅಥವಾ ಇಲ್ಲವೋ ಎನ್ನುವುದನ್ನು ಮುಂದಿನ ದಿನಗಳಲ್ಲಿ ನೋಡಬಹುದು.ರೈತರ ಬಿಲ್ನಲ್ಲಿ ಉದ್ದೇಶಪೂರ್ವಕ ಗಲಭೆಗಳು ನಡೆದಿವೆ. ಎಲ್ಲವನ್ನೂ ಸಹ ಬಿಜೆಪಿ ನಾಯಕತ್ವ ಮುಕ್ತವಾಗಿ ಸ್ವೀಕರಿಸುತ್ತದೆ” ಎಂದು ಹೇಳಿದ್ದಾರೆ.
ಬಿಟ್ ಕಾಯಿನ್ ಹಗರಣದ ಬಗ್ಗೆ ಮಾತನಾಡಿದ ಅವರು, “ಈ ಬಗ್ಗೆ ನಾವೆಲ್ಲೂ ತನಿಖೆ ಬೇಡ ಎಂದು ಹೇಳಿಲ್ಲ. ಎಲ್ಲಾ ರೀತಿಯಿಂದಲೂ ತನಿಖೆ ಮಾಡೇ ಮಾಡುತ್ತೇವೆ. ಸದ್ಯದಲ್ಲೇ ಯಾವ ಕಾಂಗ್ರೆಸ್ ಯುವ ನಾಯಕರು ಡ್ರಗ್ ಪೆಡ್ಲರ್ಗಳು ಹೇಗೆ ಭಾಗಿಯಾಗಿದ್ದಾರೆ ಎಂದು ತನಿಖೆಯಲ್ಲಿ ಗೊತ್ತಾಗಬೇಕು. ಇದು ಕೊನೆಗೆ ಕಾಂಗ್ರೆಸ್ ಕಾಲಿಗೆ ಸುತ್ತಿಕೊಳ್ಳುತ್ತದೆ” ಎಂದಿದ್ದಾರೆ.
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…
ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…
ನವೆಂಬರ್ ಮೊದಲ ವಾರದಲ್ಲಿ ಪೈಪ್ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್ಲೈನ್ ಮೂಲಕ…