ಬೆಂಗಳೂರು, : “ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಜೈಲಿಗೆ ಹೋಗುತ್ತಾರೆ ಎನ್ನುವ ಆತಂಕ ನಮ್ಮದು. ವಿಧಾನಸೌಧ ಶಕ್ತಿಪೀಠ ಮಸುಕಾಗುತ್ತಿದೆ. ನಾಯಕತ್ವ ಕೂಡಾ ಕುಸಿಯುತ್ತಿದೆ” ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಸ್ತುತ ಸಂದರ್ಭ ಸಮರ್ಪಕವಾದ ನಾಯಕತ್ವದ ಅಗತ್ಯವಿದೆ. 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ಬೇಡ ಎನ್ನುವ ಪಕ್ಷದ ಸಿದ್ದಾಂತವನ್ನು ಪಾಲಿಸುವ ವಿಚಾರದ ಬಗ್ಗೆ ನಾನು ಪ್ರಸ್ತಾಪಿಸಿದ್ದೇನೆ. ಸಿಎಂ ಯಡಿಯೂರಪ್ಪ ಅವರಿಗೆ ಮೊದಲಿಗಿದ್ದ ಶಕ್ತಿ ಈಗ ಇಲ್ಲವಾಗಿದೆ” ಎಂದಿದ್ದಾರೆ.
“ಸರ್ಕಾರ ಜನರದ್ದು, ಯಾವುದೇ ಕುಟುಂಬಕ್ಕೆ ಸೇರಿಲ್ಲ. ಸರ್ಕಾರದಲ್ಲಿ ಯಡಿಯೂರಪ್ಪ ಅವರ ಕುಟುಂಬದವರ ಹಸ್ತಕ್ಷೇಪ ಇಲ್ಲ ಎನ್ನುವುದನ್ನು ನಾನು ಹೇಳುತ್ತಿಲ್ಲ. ಈ ಬಗ್ಗೆ ಸಚಿವರೇ ಹೇಳುತ್ತಿದ್ದಾರೆ. ರಾಜ್ಯದ ಜನತೆ ತಿಳಿದಿದೆ” ಎಂದು ಹೇಳಿದ್ದಾರೆ.
“ಯಡಿಯೂರಪ್ಪ ಅವರಿಂದ ಯಾವುದೇ ಪ್ರಯೋಜನ ಇಲ್ಲವಾಗಿದೆ. ಸಿಎಂ ಅವರ ಪುತ್ರ ಬಿ.ವೈ.ವಿಜಯೇಂದ್ರ ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಈ ರೀತಿಯ ನಾಯಕತ್ವದಿಂದ ಯಾವುದೇ ಪ್ರಯೋಜನವಿಲ್ಲ. ಯಡಿಯೂರಪ್ಪ ಅವರನ್ನು ಗೌರವಿಸಿ ಮುಖ್ಯಮಂತ್ರಿ ಮಾಡಿದ್ದೇವೆ. ನಮ್ಮ ಸಹಕಾರದ ಕಾರಣ ಇಂದು ಸರ್ಕಾರ ಅಸ್ತಿತ್ವಕ್ಕೆ ಬಂದಿದೆ” ಎಂದು ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…