ಮಂಗಳೂರು: ನಮ್ಮ ಸುದ್ದಿಗೆ ಬಂದರೆ, ಕೈ ಕಾಲು ಎರಡೂ ಕಟ್. ಬೇಕಾದ್ರೆ ತಲೆ ಕಡಿಯುವೆವು ಎಂದು ಮಾಜಿ ಸಚಿವ ಯು.ಟಿ ಖಾದರ್ಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಸಿಎಎ ಸಮರ್ಥನಾ ಸಮಾವೇಶದ ವೇಳೆ ಯು.ಟಿ ಖಾದರ್ಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಮಾವೇಶಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ಖಾದರ್ಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಲಯಾಳಂ ಭಾಷೆಯಲ್ಲಿ ಖಾದರ್ ಅವರಿಗೆ ಜೀವ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೇಸರಿ ಶಾಲು ಧರಿಸಿದ್ದ ಕೆಲ ಯುವಕರ ಗುಂಪು ರಸ್ತೆ ಬದಿಯಲ್ಲಿ ನಿಂತು, ‘ನಾಯಿಯ ಮಗ ಖಾದರ್, ನಮ್ಮ ಸುದ್ದಿಗೆ ಬರಬೇಡ. ನಮ್ಮ ಸುದ್ದಿಗೆ ಬಂದರೆ, ಕೈ ಕಾಲು ಎರಡೂ ಕಟ್ ಮಾಡ್ತೇವೆ, ಬೇಕಾದ್ರೆ ತಲೆಯನ್ನೂ ಕಡಿಯುವೆವು’ ಎಂದು ಘೋಷಣೆ ಕೂಗುತ್ತಾ, ಚಪ್ಪಾಳೆ ತಟ್ಟಿ ಡ್ಯಾನ್ಸ್ ಮಾಡುತ್ತಾ ಬೆದರಿಕೆ ಹಾಕುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.
ಸುಮಾರು 56 ಸೆಕೆಂಡ್ ಇರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಆರಂಭದಲ್ಲಿ ಜೈ, ಜೈ ಬಿಜೆಪಿ ಎಂದು ಯುವಕರು ಘೋಷಣೆ ಕೂಗಿರುವ ದೃಶ್ಯಗಳು ಕೂಡ ಇದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರೇ ಯು.ಟಿ ಖಾದರ್ಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…