ಹುಬ್ಬಳ್ಳಿ: “ನಮ್ಮ ಹತ್ತು ಶಾಸಕರಿಗೆ ಕೈ ಹಾಕಿದರೆ, ನಾವು ಅವರ ಇಪ್ಪತ್ತು ಶಾಸಕರನ್ನು ಸೆಳೆಯುತ್ತೇವೆ. ಆ ಮಟ್ಟದ ಸಂಪರ್ಕ, ಸಾಮರ್ಥ್ಯ ನಮಗೂ ಇದೆ. ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದರು.
“ಕಳೆದೊಂದು ವರ್ಷದಿಂದ ಬಿಜೆಪಿಯವರು ಆಡುತ್ತಿರುವ ಎಲ್ಲ ಆಟಗಳನ್ನು ನೋಡಿದ್ದೇವೆ. ಅವರ ಆಟಕ್ಕೆ ಪ್ರತಿ ಆಟದ ಎದುರೇಟು ನೀಡಬಲ್ಲ ಕಲೆ ನಮಗೂ ಗೊತ್ತಿದೆ. ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ತಿಳಿಯುವುದು ಬೇಡ’ ಎಂದು ಖಡಕ್ ಎಚ್ಚರಿಕೆ ನೀಡಿದರು. ಕುಂದಗೋಳ, ಚಿಂಚೋಳಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ, ಬಿಜೆಪಿ ನಾಯಕರಿಂದ ಆಕ್ಷೇಪಾರ್ಹ ಹೇಳಿಕೆ, ಸಮ್ಮಿಶ್ರ ಸರ್ಕಾರ ಅಸ್ಥಿರ ಯತ್ನ, ಲೋಕಸಭೆ ಚುನಾವಣೆ ಫಲಿತಾಂಶ ಇನ್ನಿತರ ವಿಷಯಗಳ ಕುರಿತಾಗಿ ದಿನೇಶ ಗುಂಡೂರಾವ್ ಅವರು “ಉದಯವಾಣಿ’ಯೊಂದಿಗೆ ತಮ್ಮ ಮನದಾಳದ ಅನಿಸಿಕೆ ಹಂಚಿಕೊಂಡರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಲೇ ಬಂದಿದ್ದಾರೆ. ಪದೇಪದೆ ಮುಖಭಂಗ ಅನುಭವಿಸುತ್ತಿದ್ದಾರೆ. ಲೋಕಸಭೆ ಹಾಗೂ ಹಣದ ಆಮಿಷವೊಡ್ಡಿ ಡಾ| ಉಮೇಶ ಜಾಧವ ಒಬ್ಬರನ್ನು ಸೆಳೆದಿದ್ದಾರಷ್ಟೆ. ಮಾತೆತ್ತಿದರೆ ಬಿಜೆಪಿ ನಾಯಕರು ಕಾಂಗ್ರೆಸ್-ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುತ್ತಾರೆ. ಅವರಿಗೆ ಗೊತ್ತಿರಲಿ, ನಮಗೂ ಬಿಜೆಪಿ ಶಾಸಕರ ಸಂಪರ್ಕ ಇದೆ.
ಮೇ 23ರ ನಂತರ ಸಮ್ಮಿಶ್ರ ಸರ್ಕಾರ ಇನ್ನಷ್ಟು ಗಟ್ಟಿಗೊಂಡು, ಬಿಜೆಪಿಗೆ ದೊಡ್ಡ ನಿರಾಸೆ ಕಾದಿದೆ. ರಾಷ್ಟ್ರಮಟ್ಟದಲ್ಲೂ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಸರ್ಜಿಕಲ್ ಸ್ಟ್ರೈಕ್ ಸೇರಿ ಹಲವು ಭಾವನಾತ್ಮಕ ವಿಷಯಗಳ ಮೂಲಕ ಯುವಕರನ್ನು ಸೆಳೆಯುವ ಯತ್ನದಿಂದಲೇ ನಾವು ಗೆಲ್ಲುತ್ತೇವೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ ಎಂದರು..
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…